ಬ್ರೇಕಿಂಗ್ ನ್ಯೂಸ್
03-02-22 07:14 pm HK Desk news ಕರಾವಳಿ
ಉಡುಪಿ, ಫೆ.3 : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹಾಸ್ಟೆಲ್ ಒಳಗೆ ಒಯ್ಯಲು ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಕುಖ್ಯಾತಿ ಇರುವ ಪ್ರದೇಶ. ಅಲ್ಲಿನ ಎಂಐಟಿ ಕ್ಯಾಂಪಸ್ ಅಂದ್ರೆ ಹುಡುಗ- ಹುಡುಗಿಯರಿಗೆ ಭೇದವೇ ಇಲ್ಲದಷ್ಟು ನಂಟು, ತಾದಾತ್ಮ್ಯ ಬೆಳೆದಿದೆ. ಅಂಥ ಕ್ಯಾಂಪಸ್ ಒಳಗಿನಿಂದ ಸಿಸಿಟಿವಿ ದೃಶ್ಯಾವಳಿಯೊಂದು ಹೊರಬಂದಿದ್ದು ಅಲ್ಲಿನ ಹುಡುಗ- ಹುಡುಗಿಯರ ಸ್ಥಿತಿಗೆ ಕನ್ನಡಿ ಹಿಡಿಯುವಂತಿದೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಹುಡುಗರ ಹಾಸ್ಟೆಲ್ ಒಳಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಒಯ್ಯಲು ಯತ್ನಿಸಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡುತ್ತಿದ್ದರು. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಮುಂದೆ ಹೋಗಲು ಯುವಕ ಪ್ರಯತ್ನಿಸಿದ್ದು ಅತಿ ಭಾರದಿಂದ ನಲುಗಿದ್ದಾನೆ. ಬ್ಯಾಗ್ ಇಷ್ಟೊಂದು ಭಾರ ಇರುವ ಬಗ್ಗೆ ಸಂಶಯ ಬಂದು ಸೆಕ್ಯುರಿಟಿ ಸಿಬಂದಿ ಸೂಟ್ ಕೇಸ್ ತೆಗೆದು ನೋಡಿದ್ದಾರೆ.
ಸೂಟ್ ಕೇಸ್ ನೋಡಿದರೆ ಸೆಕ್ಯುರಿಟಿ ಸಿಬಂದಿ ತಮ್ಮ ಕಣ್ಣುಗಳನ್ನೇ ನಂಬದಾಗಿದ್ದಾರೆ. ಅದರ ಒಳಗಿಂದ ಯುವತಿ ಎದ್ದು ಬಂದಿದ್ದು ಅಲ್ಲಿಯೇ ಎದ್ದು ನಿಂತಿದ್ದಾಳೆ. ಜೊತೆಗಿದ್ದ ಹುಡುಗ ಗಾಬರಿಯಿಂದ ನಿಂತಲ್ಲೇ ನಿಂತು ಬಿಟ್ಟಿದ್ದ.
ಈ ಬಗ್ಗೆ ಮಣಿಪಾಲ ಪೊಲೀಸರಿಗೆ ಕೇಳಿದರೆ, ನಮಗೇನು ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಓಡಾಡುತ್ತಿದ್ದು ಅಲ್ಲಿನ ಸಿಬಂದಿಯೇ ವಿದ್ಯಾರ್ಥಿಗಳ ಚಮತ್ಕಾರವನ್ನು ಸಿಸಿಟಿವಿಯಿಂದ ತೆಗೆದು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
ಆದರೆ ಈ ವಿಡಿಯೋವನ್ನು ಮಣಿಪಾಲದ ಭದ್ರತಾ ಸಿಬಂದಿ ನಿರಾಕರಿಸಿದ್ದಾರೆ. ಇದು ಮಣಿಪಾಲದ್ದಲ್ಲ. ಬೇರೆಲ್ಲಿಯದೋ ಹಳೆಯ ವಿಡಿಯೋ ಎಂದು ಹೇಳಿದ್ದಾರೆ. ಕೆಲವರ ಪ್ರಕಾರ, ಮಣಿಪಾಲದ ಹಳೇ ವಿಡಿಯೋ ಎನ್ನುತ್ತಿದ್ದಾರೆ.
Udupi Engineering student carries his girlfriend in suitcase enters hostel gets caught by security guard. The video of this has gone viral social media.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm