ಬ್ರೇಕಿಂಗ್ ನ್ಯೂಸ್
03-02-22 07:14 pm HK Desk news ಕರಾವಳಿ
ಉಡುಪಿ, ಫೆ.3 : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹಾಸ್ಟೆಲ್ ಒಳಗೆ ಒಯ್ಯಲು ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಕುಖ್ಯಾತಿ ಇರುವ ಪ್ರದೇಶ. ಅಲ್ಲಿನ ಎಂಐಟಿ ಕ್ಯಾಂಪಸ್ ಅಂದ್ರೆ ಹುಡುಗ- ಹುಡುಗಿಯರಿಗೆ ಭೇದವೇ ಇಲ್ಲದಷ್ಟು ನಂಟು, ತಾದಾತ್ಮ್ಯ ಬೆಳೆದಿದೆ. ಅಂಥ ಕ್ಯಾಂಪಸ್ ಒಳಗಿನಿಂದ ಸಿಸಿಟಿವಿ ದೃಶ್ಯಾವಳಿಯೊಂದು ಹೊರಬಂದಿದ್ದು ಅಲ್ಲಿನ ಹುಡುಗ- ಹುಡುಗಿಯರ ಸ್ಥಿತಿಗೆ ಕನ್ನಡಿ ಹಿಡಿಯುವಂತಿದೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಹುಡುಗರ ಹಾಸ್ಟೆಲ್ ಒಳಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಒಯ್ಯಲು ಯತ್ನಿಸಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡುತ್ತಿದ್ದರು. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಮುಂದೆ ಹೋಗಲು ಯುವಕ ಪ್ರಯತ್ನಿಸಿದ್ದು ಅತಿ ಭಾರದಿಂದ ನಲುಗಿದ್ದಾನೆ. ಬ್ಯಾಗ್ ಇಷ್ಟೊಂದು ಭಾರ ಇರುವ ಬಗ್ಗೆ ಸಂಶಯ ಬಂದು ಸೆಕ್ಯುರಿಟಿ ಸಿಬಂದಿ ಸೂಟ್ ಕೇಸ್ ತೆಗೆದು ನೋಡಿದ್ದಾರೆ.
ಸೂಟ್ ಕೇಸ್ ನೋಡಿದರೆ ಸೆಕ್ಯುರಿಟಿ ಸಿಬಂದಿ ತಮ್ಮ ಕಣ್ಣುಗಳನ್ನೇ ನಂಬದಾಗಿದ್ದಾರೆ. ಅದರ ಒಳಗಿಂದ ಯುವತಿ ಎದ್ದು ಬಂದಿದ್ದು ಅಲ್ಲಿಯೇ ಎದ್ದು ನಿಂತಿದ್ದಾಳೆ. ಜೊತೆಗಿದ್ದ ಹುಡುಗ ಗಾಬರಿಯಿಂದ ನಿಂತಲ್ಲೇ ನಿಂತು ಬಿಟ್ಟಿದ್ದ.
ಈ ಬಗ್ಗೆ ಮಣಿಪಾಲ ಪೊಲೀಸರಿಗೆ ಕೇಳಿದರೆ, ನಮಗೇನು ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಓಡಾಡುತ್ತಿದ್ದು ಅಲ್ಲಿನ ಸಿಬಂದಿಯೇ ವಿದ್ಯಾರ್ಥಿಗಳ ಚಮತ್ಕಾರವನ್ನು ಸಿಸಿಟಿವಿಯಿಂದ ತೆಗೆದು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
ಆದರೆ ಈ ವಿಡಿಯೋವನ್ನು ಮಣಿಪಾಲದ ಭದ್ರತಾ ಸಿಬಂದಿ ನಿರಾಕರಿಸಿದ್ದಾರೆ. ಇದು ಮಣಿಪಾಲದ್ದಲ್ಲ. ಬೇರೆಲ್ಲಿಯದೋ ಹಳೆಯ ವಿಡಿಯೋ ಎಂದು ಹೇಳಿದ್ದಾರೆ. ಕೆಲವರ ಪ್ರಕಾರ, ಮಣಿಪಾಲದ ಹಳೇ ವಿಡಿಯೋ ಎನ್ನುತ್ತಿದ್ದಾರೆ.
Udupi Engineering student carries his girlfriend in suitcase enters hostel gets caught by security guard. The video of this has gone viral social media.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm