ಬ್ರೇಕಿಂಗ್ ನ್ಯೂಸ್
04-02-22 02:17 pm HK Desk news ಕರಾವಳಿ
ಕುಂದಾಪುರ, ಫೆ.4 : ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಭಾರೀ ಹೊಯ್ದಾಟಕ್ಕೆ ಕಾರಣವಾಗಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಗೇಟ್ ಒಳಗೆ ಬಂದು ತಮಗೆ ತರಗತಿಗೆ ಪ್ರವೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರು ಮತ್ತು ಕಾಲೇಜು ಉಪನ್ಯಾಸಕರ ನಡುವೆ ವಾಗ್ವಾದ ನಡೆದಿದ್ದು ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿನಿಯರ ಜೊತೆ ಪೋಷಕರು ಕೂಡ ಕಾಲೇಜಿಗೆ ಬಂದಿದ್ದು, ಉಪನ್ಯಾಸಕರು ಮಕ್ಕಳ ಮನವೊಲಿಕೆ ಮಾಡಿದ್ದಾರೆ. ಸರಕಾರದ ಆದೇಶ ಪಾಲನೆ ಮಾಡಬೇಕಾಗುತ್ತದೆ. ಅದಕ್ಕೆ ನೀವು ಅವಕಾಶ ಕೊಡಬೇಕು ಎಂದು ಹೇಳಿದ್ದಾರೆ. ಆದರೆ, ತಮ್ಮ ಪಟ್ಟು ಸಡಿಲಿಸದ ವಿದ್ಯಾರ್ಥಿನಿಯರು, ಕಾಲೇಜಿನ ಅರ್ಧದಲ್ಲಿ ನೀವು ಬರಬೇಡಿ ಎಂದರೆ ನಾವೇನು ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ.
ಆದರೆ ಈ ವೇಳೆ ಸ್ಥಳಕ್ಕೆ ಬಂದ ಪ್ರಾಂಶುಪಾಲರು, ಮೈದಾನದಲ್ಲೇ ವಿದ್ಯಾರ್ಥಿನಿಯರನ್ನು ತಡೆದು ನಿಲ್ಲಿಸಿದ್ದಾರೆ. ಜೊತೆಗೆ ಸ್ಥಳಕ್ಕೆ ಪೊಲೀಸರನ್ನೂ ಕರೆಸಿದ್ದಾರೆ. 20ರಷ್ಟು ವಿದ್ಯಾರ್ಥಿನಿಯರು ಹೊರಗೆ ನಿಂತಿದ್ದು, ಕನಿಷ್ಠ ತಮ್ಮನ್ನು ಕಾಲೇಜು ಒಳಗಿನ ಸ್ಟೇಜ್ ಬಳಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ ಪ್ರಾಂಶುಪಾಲರು ಅವಕಾಶ ಕೊಡದೇ ಹೊರಗೆ ತೆರಳುವಂತೆ ಹೇಳಿದ್ದಾರೆ.
ಇದೇ ವೇಳೆ, ಕಾಲೇಜು ಗೇಟಿಗೆ ಬೀಗ ಹಾಕಿದ್ದು, ಹೊರಭಾಗದಲ್ಲಿ ನಿಂತ ಪೋಷಕರು ವಾಗ್ವಾದ ನಡೆಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಕುಂದಾಪುರ ಪೊಲೀಸ್ ಇನ್ ಸ್ಪೆಕ್ಟರ್ ಶ್ರೀಕಾಂತ್ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜು ಮುಂದೆ ಪ್ರತಿಭಟನೆ ನಡೆಸಿದರೆ ಎಫ್ಐಆರ್ ದಾಖಲು ಮಾಡುವುದಾಗಿ ಬೆದರಿಸಿದ್ದಾರೆ. ಆದರೆ ಪೊಲೀಸರ ಎಚ್ಚರಿಕೆಗೆ ಮಣಿಯದ ವಿದ್ಯಾರ್ಥಿನಿಯರು ಕಾಲೇಜಿನ ಗೇಟ್ ಬಳಿ ಕುಳಿತು ಪುಸ್ತಕ ತೆಗೆದು ಓದಲು ತೊಡಗಿದ್ದಾರೆ. ಸರಕಾರದ ಗೊಂದಲದ ಆದೇಶ ಮತ್ತು ವಿದ್ಯಾರ್ಥಿನಿಯರು ಪಟ್ಟು ಹಿಡಿದು ನಡೆಸುತ್ತಿರುವ ಹೋರಾಟಕ್ಕೆ ಕಾಲೇಜು ಸಿಬಂದಿ ಹೈರಾಣಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯೊಬ್ಬಳು, ಹಿಜಾಬ್ ನಮ್ಮ ಜೀವನದ ಭಾಗ. ನಮ್ಮ ಹಿರಿಯರು ಹಿಜಾಬ್ ಧರಿಸುತ್ತಿದ್ದರು. ನನ್ನತ್ತೆ ಕೂಡ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಅಚಾನಕ್ಕಾಗಿ ಈ ರೂಲ್ಸ್ ಯಾಕೆ ಬಂತು. ನಾವು ಹಿಜಾಬ್ ಹಾಕಿದರೆ ಯಾರಿಗೇನು ತೊಂದರೆ ಇದೆ. ನಮ್ಮ ಪ್ರಶ್ನೆಗೆ ಉತ್ತರ ಇಲ್ಲ. ಪ್ರಾಂಶುಪಾಲರು ಸರಕಾರದ ಸೂಚನೆ ಎನ್ನುತ್ತಾರೆ. ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಯಾಕೆ ಬಂತು. ನಿನ್ನೆಯಿಂದ ನಮ್ಮನ್ನು ಗೇಟ್ ಒಳಗೆ ಬಿಡುತ್ತಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಹೈಕೋರ್ಟಿನಿಂದ ರಾಜ್ಯ ಸರಕಾರಕ್ಕೆ ನೋಟಿಸ್
ಇತ್ತ ಉಡುಪಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿದ್ದು, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಯಾಗಿದೆ. ಅಲ್ಲದೆ, ಉಡುಪಿ ಜಿಲ್ಲಾಡಳಿತ, ಕಾಲೇಜು ಆಡಳಿತ, ಶಿಕ್ಷಣ ಇಲಾಖೆ ಕಾರ್ಯದರ್ಶಿ, ಶಾಸಕರನ್ನು ಕೂಡ ಪ್ರತಿವಾದಿ ಮಾಡಲಾಗಿದ್ದು, ಎಲ್ಲರಿಗೂ ನೋಟಿಸ್ ಜಾರಿಯಾಗಿದೆ. ಮುಂದಿನ ವಿಚಾರಣೆ ಮಂಗಳವಾರ ನಡೆಯಲಿದ್ದು ಅಂದು ರಾಜ್ಯ ಸರಕಾರದ ಕಡೆಯಿಂದ ಉತ್ತರ ನೀಡಬೇಕಾಗಿದೆ.
The controversy over the wearing of Hijab continued in the town even on Friday February 4, the third day of the tussle. Muslim girl students attended the government PU college today too with Hijabs and they were refused entry into the college compound.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm