ಬ್ರೇಕಿಂಗ್ ನ್ಯೂಸ್
04-02-22 03:25 pm HK Desk news ಕರಾವಳಿ
ಕುಂದಾಪುರ, ಫೆ.4 : ಉಡುಪಿ, ಕುಂದಾಪುರದ ಬಳಿಕ ಜಿಲ್ಲೆಯ ಗಡಿಭಾಗ ಬೈಂದೂರಿನಲ್ಲೂ ಹಿಜಾಬ್ ವಿವಾದದ ಹೆಸರಲ್ಲಿ ಕಿಡಿ ಎಬ್ಬಿಸುವ ಪ್ರಯತ್ನ ನಡೆದಿದೆ. ರಾಜ್ಯ ಸರಕಾರ ಆದೇಶ ಮಾಡಿದೆ ಎಂಬ ನೆಪದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಕಾಲೇಜು ಆವರಣಕ್ಕೆ ನುಗ್ಗಿ ಕಿರಿಕ್ ಎಬ್ಬಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನೀಡಬಾರದು ಎಂದು ಆಗ್ರಹ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆ ಬೈಂದೂರಿನ ಸರಕಾರಿ ಪದವಿಪೂರ್ವ ಕಾಲೇಜು ಆವರಣಕ್ಕೆ ಬಂದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಹಿಂದು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ತೊಡಿಸಿದ್ದಾರೆ. ಈ ವೇಳೆ, ಕಾಲೇಜಿನ ಪ್ರಾಂಶುಪಾಲರು ಬಂದು ಸಂಘಟನೆಯ ಕಾರ್ಯಕರ್ತರನ್ನು ಪ್ರಶ್ನೆ ಮಾಡಿದ್ದು, ಕಾಲೇಜು ಒಳಗೆ ಬಂದು ಹೀಗೆ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಗೊಂದಲ ನಿರ್ಮಾಣ ಆಗುತ್ತದೆ ಎಂದು ತಿಳಿಹೇಳಿದ್ದಾರೆ.
ಆದರೆ ಸಂಘಟನೆಯ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಕಾಲೇಜಿಗೆ ಬರುತ್ತಾರೆ. ಹಿಜಾಬ್, ಸ್ಕಾರ್ಫ್ ತೊಟ್ಟು ತರಗತಿಗೆ ಬರುತ್ತಾರೆ. ಕಾಲೇಜಿನಲ್ಲಿ ಸಮವಸ್ತ್ರ ಇದ್ದ ಬಳಿಕ ಎಲ್ಲರಿಗೂ ಒಂದೇ ರೀತಿಯ ಅವಕಾಶ ಕೊಡಬೇಕು. ನಿಯಮ ಎಲ್ಲರಿಗೂ ಒಂದೇ ರೀತಿ ಅನ್ವಯ ಮಾಡಿ. ಸರಕಾರದ ಆದೇಶವನ್ನು ಪಾಲನೆ ಮಾಡಿ ಎಂದು ಒತ್ತಾಯಿಸಿದ್ದಾರೆ. ನಾವು ಈ ಬಗ್ಗೆ ನಿರ್ಧಾರಕ್ಕೆ ಬರಲು ಸಾಧ್ಯವಾಗುವುದಿಲ್ಲ. ಹಾಗೆಂದು ನೀವು ಮನವಿ ಕೊಟ್ಟರೆ ಕಾಲೇಜಿನ ಆಡಳಿತದ ಗಮನಕ್ಕೆ ತರುತ್ತೇವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಆದರೆ ನೀವು ಏಕಾಏಕಿ ಕಾಲೇಜಿನ ಯುವಕರಿಗೆ ಕೇಸರಿ ಶಾಲು ತೊಡಿಸಿದ್ದು ತಪ್ಪು ಎಂದು ಹೇಳಿದ್ದಾರೆ.
ಕಾಲೇಜು ಹುಡುಗರೆಲ್ಲ ಕೇಸರಿ ಶಾಲು ಹಾಕ್ಕೊಂಡು ತರಗತಿಗೆ ಬಂದಿದ್ದು, ಉಡುಪಿ, ಕುಂದಾಪುರದ ಬಳಿಕ ಬೈಂದೂರಿನಲ್ಲಿಯೂ ಹೊಸ ವಿವಾದ ಭುಗಿಲೇಳುವಂತೆ ಮಾಡಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದು, ಕ್ಯಾಂಪಸ್ ಒಳಗಡೆ ಬುರ್ಖಾ ತೆಗೆದು ತರಗತಿ ಪ್ರವೇಶ ಮಾಡುತ್ತಾರೆ. ಆದರೆ ತಲೆ ಮತ್ತು ಕುತ್ತಿಗೆ ಮುಚ್ಚುವ ಸ್ಕಾರ್ಫ್ ಮತ್ತು ಹಿಜಾಬ್ ಧರಿಸುತ್ತಾರೆ. ಆದರೆ ಉಡುಪಿ, ಕುಂದಾಪುರದಲ್ಲಿ ವಿವಾದ ಏಳುತ್ತಿದ್ದಂತೆ ಹಿಂದು ಸಂಘಟನೆಗಳು ಬೈಂದೂರಿನಲ್ಲೂ ಕಿರಿಕ್ ಆರಂಭಿಸಿದ್ದು ವಿವಾದದ ಕಿಡಿ ಎಬ್ಬಿಸಿದೆ.
It looks like the controversy over girl students wearing hijab to a college in Karnataka’s Udupi has now become a hijab versus saffron shawl standoff in some coastal towns of the district. In a fresh incident on Friday, Hindutva outfits allegedly forced Hindu boys to wear saffron shawl to the Government Pre-University College in Byndoor.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm