ಬ್ರೇಕಿಂಗ್ ನ್ಯೂಸ್
04-02-22 03:25 pm HK Desk news ಕರಾವಳಿ
ಕುಂದಾಪುರ, ಫೆ.4 : ಉಡುಪಿ, ಕುಂದಾಪುರದ ಬಳಿಕ ಜಿಲ್ಲೆಯ ಗಡಿಭಾಗ ಬೈಂದೂರಿನಲ್ಲೂ ಹಿಜಾಬ್ ವಿವಾದದ ಹೆಸರಲ್ಲಿ ಕಿಡಿ ಎಬ್ಬಿಸುವ ಪ್ರಯತ್ನ ನಡೆದಿದೆ. ರಾಜ್ಯ ಸರಕಾರ ಆದೇಶ ಮಾಡಿದೆ ಎಂಬ ನೆಪದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಕಾಲೇಜು ಆವರಣಕ್ಕೆ ನುಗ್ಗಿ ಕಿರಿಕ್ ಎಬ್ಬಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನೀಡಬಾರದು ಎಂದು ಆಗ್ರಹ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆ ಬೈಂದೂರಿನ ಸರಕಾರಿ ಪದವಿಪೂರ್ವ ಕಾಲೇಜು ಆವರಣಕ್ಕೆ ಬಂದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಹಿಂದು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ತೊಡಿಸಿದ್ದಾರೆ. ಈ ವೇಳೆ, ಕಾಲೇಜಿನ ಪ್ರಾಂಶುಪಾಲರು ಬಂದು ಸಂಘಟನೆಯ ಕಾರ್ಯಕರ್ತರನ್ನು ಪ್ರಶ್ನೆ ಮಾಡಿದ್ದು, ಕಾಲೇಜು ಒಳಗೆ ಬಂದು ಹೀಗೆ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಗೊಂದಲ ನಿರ್ಮಾಣ ಆಗುತ್ತದೆ ಎಂದು ತಿಳಿಹೇಳಿದ್ದಾರೆ.


ಆದರೆ ಸಂಘಟನೆಯ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಕಾಲೇಜಿಗೆ ಬರುತ್ತಾರೆ. ಹಿಜಾಬ್, ಸ್ಕಾರ್ಫ್ ತೊಟ್ಟು ತರಗತಿಗೆ ಬರುತ್ತಾರೆ. ಕಾಲೇಜಿನಲ್ಲಿ ಸಮವಸ್ತ್ರ ಇದ್ದ ಬಳಿಕ ಎಲ್ಲರಿಗೂ ಒಂದೇ ರೀತಿಯ ಅವಕಾಶ ಕೊಡಬೇಕು. ನಿಯಮ ಎಲ್ಲರಿಗೂ ಒಂದೇ ರೀತಿ ಅನ್ವಯ ಮಾಡಿ. ಸರಕಾರದ ಆದೇಶವನ್ನು ಪಾಲನೆ ಮಾಡಿ ಎಂದು ಒತ್ತಾಯಿಸಿದ್ದಾರೆ. ನಾವು ಈ ಬಗ್ಗೆ ನಿರ್ಧಾರಕ್ಕೆ ಬರಲು ಸಾಧ್ಯವಾಗುವುದಿಲ್ಲ. ಹಾಗೆಂದು ನೀವು ಮನವಿ ಕೊಟ್ಟರೆ ಕಾಲೇಜಿನ ಆಡಳಿತದ ಗಮನಕ್ಕೆ ತರುತ್ತೇವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಆದರೆ ನೀವು ಏಕಾಏಕಿ ಕಾಲೇಜಿನ ಯುವಕರಿಗೆ ಕೇಸರಿ ಶಾಲು ತೊಡಿಸಿದ್ದು ತಪ್ಪು ಎಂದು ಹೇಳಿದ್ದಾರೆ.


ಕಾಲೇಜು ಹುಡುಗರೆಲ್ಲ ಕೇಸರಿ ಶಾಲು ಹಾಕ್ಕೊಂಡು ತರಗತಿಗೆ ಬಂದಿದ್ದು, ಉಡುಪಿ, ಕುಂದಾಪುರದ ಬಳಿಕ ಬೈಂದೂರಿನಲ್ಲಿಯೂ ಹೊಸ ವಿವಾದ ಭುಗಿಲೇಳುವಂತೆ ಮಾಡಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದು, ಕ್ಯಾಂಪಸ್ ಒಳಗಡೆ ಬುರ್ಖಾ ತೆಗೆದು ತರಗತಿ ಪ್ರವೇಶ ಮಾಡುತ್ತಾರೆ. ಆದರೆ ತಲೆ ಮತ್ತು ಕುತ್ತಿಗೆ ಮುಚ್ಚುವ ಸ್ಕಾರ್ಫ್ ಮತ್ತು ಹಿಜಾಬ್ ಧರಿಸುತ್ತಾರೆ. ಆದರೆ ಉಡುಪಿ, ಕುಂದಾಪುರದಲ್ಲಿ ವಿವಾದ ಏಳುತ್ತಿದ್ದಂತೆ ಹಿಂದು ಸಂಘಟನೆಗಳು ಬೈಂದೂರಿನಲ್ಲೂ ಕಿರಿಕ್ ಆರಂಭಿಸಿದ್ದು ವಿವಾದದ ಕಿಡಿ ಎಬ್ಬಿಸಿದೆ.
It looks like the controversy over girl students wearing hijab to a college in Karnataka’s Udupi has now become a hijab versus saffron shawl standoff in some coastal towns of the district. In a fresh incident on Friday, Hindutva outfits allegedly forced Hindu boys to wear saffron shawl to the Government Pre-University College in Byndoor.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm