ಬ್ರೇಕಿಂಗ್ ನ್ಯೂಸ್
04-02-22 10:13 pm HK Desk news ಕರಾವಳಿ
ಬಂಟ್ವಾಳ, ಫೆ.4 : ಇತ್ತೀಚೆಗೆ ಮದುವೆ ಸಂಭ್ರಮದ ಮಧ್ಯೆ ಕೊರಗಜ್ಜನ ವೇಷ ಹೋಲುವಂತೆ ಬಟ್ಟೆ ತೊಟ್ಟು ವಿವಾದಕ್ಕೆ ಕಾರಣವಾಗಿದ್ದ ಮದುಮಗ ಉಪ್ಪಳ ನಿವಾಸಿ ಉಮರುಲ್ ಬಾಷಿತ್ ವಿದೇಶಕ್ಕೆ ಪಲಾಯನ ಮಾಡುವುದನ್ನು ತಿಳಿದು ಕೊಚ್ಚಿ ಏರ್ಪೋರ್ಟ್ ಬಳಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಬೇಕೂರು ನಿವಾಸಿಯಾಗಿರುವ ಉಮರುಲ್, ಜ.6 ರಂದು ಮದುವೆಯ ದಿನ ಸಾಲೆತ್ತೂರಿನ ವಧುವಿನ ಮನೆಗೆ ಬಂದಿದ್ದ ವೇಳೆ ಕೊರಗಜ್ಜನ ರೀತಿ ವೇಷ ತೊಟ್ಟು ಅಣಕಿಸುವಂತೆ ವರ್ತಿಸಿದ್ದ. ಈ ಬಗ್ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿದ ಪೊಲೀಸರು ಉಮರುಲ್ ಸ್ನೇಹಿತರಾದ ಅಹಮದ್ ಮುಜಿತಬ್ ಹಾಗೂ ಮೊಹಿಯುದ್ದೀನ್ ಮುನೀಸ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆಬಳಿಕ ಉಮರುಲ್ ಬಂಧನಕ್ಕೆ ಮುಂದಾಗಿದ್ದರು. ಆದರೆ ಉಮರುಲ್ ತಲೆಮರೆಸಿಕೊಂಡಿದ್ದ. ಇದೀಗ ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸಿ ಕೊಚ್ಚಿನ್ ಏರ್ಪೋರ್ಟ್ ಬಳಿಯ ನೆಡುಂಬಾಶ್ಶೇರಿ ಎಂಬಲ್ಲಿ ಅಡಗಿಕೊಂಡಿದ್ದ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ ವಿಟ್ಲ ಪೊಲೀಸರು, ಆರೋಪಿ ಉಮರುಲ್ ನನ್ನು ಬಂಧಿಸಿದ್ದಾರೆ. ಮದುವೆ ಸಂಭ್ರಮದಲ್ಲಿ ಕೊರಗಜ್ಜನ ರೀತಿ ವೇಷ ತೊಟ್ಟು ವಿಕೃತವಾಗಿ ವರ್ತಿಸಿದ್ದ ವಿಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು.
It is learnt that Umarul Bashith, main accused in the case relating to mockery of Tulunadu Daiva Koragajja by a group of youths belonging to other community, is arrested by airport officials of Nadumban Cheri at Kochi in Kerala.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm