ಬ್ರೇಕಿಂಗ್ ನ್ಯೂಸ್
05-02-22 02:14 pm HK Desk news ಕರಾವಳಿ
ಪುತ್ತೂರು, ಫೆ.5 : ಹಿರಿಯ ಪತ್ರಕರ್ತ, ಪುತ್ತೂರಿನಲ್ಲಿ ಉದಯವಾಣಿ ಪತ್ರಿಕೆಯನ್ನು ಜನಪ್ರಿಯರಾಗಿಸಿದ್ದ ಬಿ.ಟಿ ರಂಜನ್ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಕಾರಣ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ವಿವಿಧ ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಮುಂಗಾರು ಪತ್ರಿಕೆಯಿಂದ ಕೆಲಸ ಆರಂಭಿಸಿ, ಬಳಿಕ ಹೊಸದಿಗಂತ, ಆನಂತರ ಉದಯವಾಣಿ ಸೇರಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್, ಅದರಲ್ಲಿ ಸುದೀರ್ಘ 26 ವರ್ಷ ಕಾಲ ದುಡಿದಿದ್ದರು. ಪುತ್ತೂರು ಸುದಿನ ಪುಟದ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು. ಉದಯವಾಣಿ ಪುತ್ತೂರಿನಲ್ಲಿ ಪ್ರಸಾರ ಹೆಚ್ಚಿಸಲು ಮತ್ತು ಜನಮನ ಮುಟ್ಟುವಲ್ಲಿ ರಂಜನ್ ಬರಹಗಳು ಕಾರಣವಾಗಿದ್ದವು.
2017ರಲ್ಲಿ ಉದಯವಾಣಿಯಿಂದ ನಿವೃತ್ತರಾಗಿದ್ದ ರಂಜನ್, ಆಬಳಿಕ ಹೊಸದಿಗಂತ ಪತ್ರಿಕೆಗೆ ವರದಿಗಾರರಾಗಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ರಂಜನ್ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಕ್ಕೂ ಹೆಚ್ಚಿನ ಪತ್ರಿಕಾ ಸೇವೆಗಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.
Puttur Senior Journalist B T Ranjan passes away at 60. Since two to there days he was suffering from Cold and Cough but he breathed his last at Puttur Hospital.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm