ಬ್ರೇಕಿಂಗ್ ನ್ಯೂಸ್
05-02-22 10:26 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ನಗರದ ಕೊಡಿಯಾಲ್ ಬೈಲ್ನ ಶಾರದಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದರು.
ಪ್ರಶಸ್ತಿಗಾಗಿ ನಾವು ಎಂದೂ ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಅವರು ಹೇಳಿದರು.
ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಪೂರ್ತಿಯ ಸೆಲೆಯಂತಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಲಿಂಗ ನಾಯ್ಕ, ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆ ಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿಯಬೇಕು ಎಂದು ತಿಳಿಸಿದರು. ಗುಡ್ಡದಲ್ಲಿ ಮೂರು ಬಾವಿ ಅಗೆದು ನೀರು ಸಿಗದೆ ಸುರಂಗ ತೋಡಲು ಮುಂದಾದಾಗ ಇವನ್ಯಾಕೆ ಗುಡ್ಡದಲ್ಲಿ ಇನ್ನೂ ಇದ್ದಾನೆ, ಅಲ್ಲಿ ನೀರು ಸಿಗದು ಎಂದೇ ಹೆಚ್ಚಿನವರು ಹೇಳಿದ್ದರು.
ಆದರೆ ಅಂದು ನನಗೆ ಅದು ಅನಿವಾರ್ಯವಾಗಿತ್ತು. ನಾನು ಛಲ ಬಿಡದೆ ಯಾಕೆ ನೀರು ಸಿಗುವುದಿಲ್ಲ ಎಂದು ನನ್ನ ಕಾಯಕ ಮಾಡಿದೆ. ಅದಕ್ಕೆ ಫಲ ದೊರಕಿದೆ. ಇಂದು ಬೋಳುಗುಡ್ಡದಲ್ಲಿ ಹಚ್ಚ ಹಸಿರಿನ ಕೃಷಿ ಇದೆ. ಮಳೆ ನೀರನ್ನು ಕೂಡ ನನ್ನ ಜಾಗದಿಂದ ಹೊರ ಹೋಗದಂತೆ ಮಾಡಿ ಅಂತರ್ಜಲವನ್ನು ಕಾಪಾಡಿಕೊಂಡು ಬಂದಿದ್ದೇನೆ ಎಂದವರು ಹೇಳಿದರು. ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಶಾರದಾ ವಿದ್ಯಾಲಯದ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.
No application for Rajyotsava awards says Sunil Kumar during media interaction in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm