ಬ್ರೇಕಿಂಗ್ ನ್ಯೂಸ್
08-02-22 11:44 am HK Desk news ಕರಾವಳಿ
ಉಡುಪಿ, ಫೆ.8 : ಉಡುಪಿ ಎಂಜಿಎಂ ಕಾಲೇಜು ಆವರಣದಲ್ಲಿ ಕೇಸರಿ ಮತ್ತು ಹಿಜಾಬ್ ಕಿಚ್ಚು ತೀವ್ರಗೊಂಡಿದ್ದು ವಿದ್ಯಾರ್ಥಿಗಳು ಹೈಡ್ರಾಮಾ ನಡೆಸಿದ್ದಾರೆ. ನೂರಾರು ವಿದ್ಯಾರ್ಥಿಗಳು ಕೇಸರಿ ತೊಟ್ಟು ಕಾಲೇಜು ಒಳಗೆ ಲಗ್ಗೆ ಇಟ್ಟಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆಯೇ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಎರಡೂ ಕಡೆಯಿಂದ ವಿದ್ಯಾರ್ಥಿಗಳು ಗುಂಪು ಸೇರಿದ್ದು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು, ತಮಗೆ ಹಿಜಾಬ್ ಬೇಕೆಂದು ಘೋಷಣೆ ಕೂಗಿದರೆ, ಹಿಂದು ವಿದ್ಯಾರ್ಥಿಗಳು ವಿರೋಧಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಪೇಟ, ಕೇಸರಿ ಶಾಲು ಹಾಕಿಕೊಂಡು ಕಾಲೇಜು ಒಳನುಗ್ಗಿದ್ದು ಕಾಲೇಜು ಆವರಣದಲ್ಲಿ ಕೇಸರಿ ಕಲರವ ಎದ್ದಿದೆ. ವಿದ್ಯಾರ್ಥಿಗಳು ತಮ್ಮ ಕೇಸರಿ ಶಾಲನ್ನು ಬೀಸಿಕೊಂಡು ಓಡಾಡುತ್ತಿದ್ದು ಕ್ಯಾಂಪಸ್ ಒಳಗೆ ಗಲಾಟೆ ಎದ್ದಿದೆ. ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ನಾಯಕ್ ಮತ್ತು ಇತರ ಸಿಬಂದಿ ಸೇರಿ ವಿದ್ಯಾರ್ಥಿಗಳ ಮನವೊಲಿಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು, ನಾವು ಕಳೆದ ಐದು ವರ್ಷದಿಂದಲೂ ಹಿಜಾಬ್ ಹಾಕಿಯೇ ಬರುತ್ತಿದ್ದೆವು. ಈವರೆಗೂ ಹಿಜಾಬ್ ಹಾಕಬಾರದು ಎಂದು ಕಾಲೇಜಿನಲ್ಲಿ ಯಾರೂ ಹೇಳಿಲ್ಲ. ಇತರ ವಿದ್ಯಾರ್ಥಿಗಳು ಕೂಡ ಹೇಳಿಲ್ಲ. ಈಗ ಸಡನ್ನಾಗಿ ಇಂಥ ವಾತಾವರಣ ಉಂಟು ಮಾಡಿದ್ದಾರೆ. ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ಉಳಿದಂತೆ ಕಳೆದ ವಾರ ಹಿಜಾಬ್ ಗಲಾಟೆ ನಡೆದಿದ್ದ ಉಡುಪಿ, ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಇಂದು ಬಿಸಿ ಸ್ವಲ್ಪ ತಣ್ಣಗಾಗಿದೆ. ಕುಂದಾಪುರದ ಕಾಲೇಜಿನಲ್ಲಿ ಎರಡು ದಿನಗಳ ಹಿಂದೆ ರಂಪ ಮಾಡಿದ್ದ ವಿದ್ಯಾರ್ಥಿನಿಯರು ಕಾಲೇಜಿಗೆ ರಜೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಹೈಕೋರ್ಟಿನಲ್ಲಿ ವಿಚಾರಣೆ ಇರುವುದರಿಂದ ಕಾಲೇಜು ಪ್ರಾಂಶುಪಾಲರೇ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಬರದಂತೆ ಸೂಚಿಸಿದ್ದಾರೆಂಬ ಮಾಹಿತಿಯೂ ಇದೆ.
The Muslim girl students of MGM College here have kept the Hijab controversy alive by refusing to obey the instructions of the principal. The girl students wearing burqas and Hijab entered the college located at Manipal here on Monday February 8. They held a protest inside the college premises and raised slogans asserting that wearing of Hijabs is within their rights.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm