ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm