ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 02:06 pm
HK News Staffer
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm