ಬ್ರೇಕಿಂಗ್ ನ್ಯೂಸ್
12-02-22 01:35 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12 : ಮರಳು ಮಾಫಿಯಾದಲ್ಲಿ ಕಮಿಷನ್ ಪಡೆದ ಆರೋಪದಲ್ಲಿ ಆಣೆ ಪ್ರಮಾಣದ ಸವಾಲು ಸ್ವೀಕರಿಸಿದ್ದ ಶಾಸಕ ಹರತಾಳು ಹಾಲಪ್ಪ ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿದ್ದಾರೆ.
ಆರೋಪ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಇಬ್ಬರು ಕೂಡ ಇಂದು ಧರ್ಮಸ್ಥಳಕ್ಕೆ ಬರುತ್ತಾರೆ ಎನ್ನಲಾಗಿತ್ತು. ಇಂದು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಮಾತ್ರ ಧರ್ಮಸ್ಥಳಕ್ಕೆ ಬಂದಿದ್ದು ಮಂಜುನಾಥನ ದರ್ಶನ ಪಡೆದು ಆಣೆ ಪ್ರಮಾಣ ಮಾಡಿದ್ದಾರೆ. ಬೆಂಬಲಿಗರ ಜೊತೆ ದೇವರ ದರ್ಶನ ಪಡೆದು ದೇವರ ಎದುರೇ ಆಣೆ ಮಾಡಿದ್ದಾಗಿ ಶಾಸಕ ಹಾಲಪ್ಪ ಹೇಳಿಕೊಂಡಿದ್ದಾರೆ. ಆದರೆ ಬೇಳೂರು ಗೋಪಾಲಕೃಷ್ಣ ದೇವಸ್ಥಾನಕ್ಕೆ ಬರದೆ ದೂರ ಉಳಿದಿದ್ದಾರೆ.

ಮರಳು ಮಾಫಿಯಾದಿಂದ ತಾನಾಗಲಿ, ತನ್ನ ಸಂಗಡಿಗರಾಗಲಿ ಕಮಿಷನ್ ಪಡೆದಿಲ್ಲ. ಆದರೆ ಬೇಳೂರು ಗೋಪಾಲಕೃಷ್ಣ ವಿನಾಕಾರಣ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆಬಳಿಕ ನನ್ನ ಜೊತೆಗಿರುವ ವಿನಾಯಕ ರಾವ್ ಮತ್ತು ಬಿ.ಟಿ ರವೀಂದ್ರ ಬಗ್ಗೆ ಆರೋಪ ಮಾಡಿದ್ದರು. ಈಗ ನಾವು ಎಲ್ಲ ಜೊತೆಗೆ ಬಂದು ಆಣೆ ಮಾಡಿ ಹೇಳಿದ್ದೇವೆ. ಮಾಜಿ ಶಾಸಕರ ಸವಾಲನ್ನು ಸ್ವೀಕರಿಸಿ ಫೆ.12 ರಂದು ಧರ್ಮಸ್ಥಳಕ್ಕೆ ತೆರಳುತ್ತಿರುವುದಾಗಿ ಮಾಧ್ಯಮದಲ್ಲಿ ಪ್ರಕಟಣೆ ಕೊಟ್ಟಿದ್ದೆ. ಆದರೆ ನನಗೆ ಆಣೆ ಪ್ರಮಾಣದ ಸವಾಲು ಹಾಕಿ ಅವರು ಈಗ ಪಲಾಯನ ಮಾಡುತ್ತಿದ್ದಾರೆ. ಈಗ ಗೋವಾ ಚುನಾವಣೆಯ ಸುಬೂಬು ಹೇಳ್ತಾ ಇದ್ದಾರೆ. ಬೇಳೂರು ಗೋಪಾಲಕೃಷ್ಣ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ನನಗೆ ಸವಾಲು ಹಾಕಿದವರು ಈಗ ಧರ್ಮಸ್ಥಳಕ್ಕೆ ಬರಲಿ. ದೇವರೆದುರು ನಾನು ಆಣೆ ಪ್ರಮಾಣ ಮಾಡಿದ್ದೇನೆ. ಅವರೂ ಬಂದು ಮಾಡಲಿ ಎಂದು ಹರತಾಳು ಹಾಲಪ್ಪ ಹೇಳಿದ್ದಾರೆ.
Sand Commision, Halappa Harathalu visits Dharmasthala temple by taking oath as he challenged of doing it.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm