ಬ್ರೇಕಿಂಗ್ ನ್ಯೂಸ್
12-02-22 08:51 pm Mangalore Correspondent ಕರಾವಳಿ
ಉಳ್ಳಾಲ, ಫೆ.12 : 17 ವರ್ಷಗಳಿಂದ ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತಾ ಸ್ವಂತದ ಲಕ್ಷಾಂತರ ರೂಪಾಯಿಗಳನ್ನ ಖರ್ಚು ಮಾಡಿದ್ದರೂ ಸಹ ತನ್ನನ್ನು ಮುಸಲ್ಮಾನನೆಂಬ ಏಕೈಕ ಕಾರಣಕ್ಕೆ ತುಳಿದರು ಎಂದು ಆರೋಪಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎ.ಮುನೀರ್ ಬಾವಾ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಉದ್ಯಮಿಯಾಗಿರುವ ಕೆ.ಎ.ಮುನೀರ್ ಬಾವಾ ಅವರು ಕಳೆದ 17 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದು ಇದೀಗ ದಿಢೀರ್ ಆಗಿ ಪಕ್ಷದ ಪ್ರಮುಖರಿಗೆ ತನ್ನ ರಾಜೀನಾಮೆಯನ್ನ ರವಾನಿಸಿದ್ದಾರೆ. ಪಕ್ಷ ಅಧಿಕಾರದಲ್ಲಿರದ ಸಂದರ್ಭದಲ್ಲಿಯೂ ಯಾವುದೇ ಫಲಾಪೇಕ್ಷೆ ಇಲ್ಲದೆ ದುಡಿದಿದ್ದೇನೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ತಾನು ಸ್ವಂತದ ಲಕ್ಷಾಂತರ ಹಣವನ್ನೂ ವ್ಯಯಿಸಿದ್ದೇನೆ. ಅಲ್ಪಸಂಖ್ಯಾತ ಬಾಹುಳ್ಯದ ಉಳ್ಳಾಲ ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಬಿಜೆಪಿಗೆ ಲಭಿಸುವಂತೆ ಮಾಡಿದ್ದೇನೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ತಾನು ಮುಸಲ್ಮಾನನೆಂಬ ಏಕೈಕ ಕಾರಣಕ್ಕೆ ಉಳ್ಳಾಲದ ಕೆಲ ಬಿಜೆಪಿ ಪ್ರಮುಖರು ತನ್ನನ್ನ ತುಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
ಇತರ ಪಕ್ಷದಿಂದ ಬಿಜೆಪಿಗೆ ವಲಸೆ ಬಂದವರು ಪಕ್ಷದಲ್ಲಿ ಅಧಿಕಾರ ಪಡೆದು ವಿಜೃಂಭಿಸುತ್ತಿದ್ದು ಇದನ್ನೆಲ್ಲವನ್ನೂ ಸಹಿಸಿ ತಾನು ಪಕ್ಷ ಸಂಘಟನೆಗಾಗಿ ದುಡಿದಿದ್ದೇನೆ. ಮುಸಲ್ಮಾನನೆಂಬ ಕಾರಣಕ್ಕೆ ಇದೀಗ ತನ್ನನ್ನು ಮೂಲೆಗುಂಪು ಮಾಡಿದ್ದು ಇದರಿಂದ ಬೇಸರಗೊಂಡು ರಾಜಿನಾಮೆ ನೀಡುತ್ತಿದ್ದೇನೆ ಎಂದು ಮುನೀರ್ ಬಾವಾ ತನ್ನ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಜಿನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ಕ್ಷೇತ್ರ ಸಮಿತಿ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಮುನೀರ್ ಅವರ ರಾಜೀನಾಮೆ ಪತ್ರಕ್ಕೆ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ.
DK Bjp Minority Secretary Muneer Bava resigns from BJP party as he finds no support because he is Muslim. He alleged that after spending lakhs of rupees for the party yet leaders considered me only as Muslim and never supported me he said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm