ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm