ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm