ಬ್ರೇಕಿಂಗ್ ನ್ಯೂಸ್
16-02-22 09:05 pm Mangalore Correspondent ಕರಾವಳಿ
ಮಂಗಳೂರು, ಫೆ.16 : ಗಡಿನಾಡು ಕಾಸರಗೋಡು ಜಿಲ್ಲೆಯ ಕುಗ್ರಾಮದಲ್ಲಿ ಬೆಳೆದ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದಲ್ಲಿ ಎಂಡಿಎಸ್ ವಿಭಾಗದಲ್ಲಿ ಮೊದಲ ರ್ಯಾಂಕಿನೊಂದಿಗೆ ಚಿನ್ನದ ಪದಕದ ಗಳಿಸಿದ್ದು ಮಹತ್ತರ ಸಾಧನೆ ಮಾಡಿದ್ದಾಳೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಬಳಿಯ ಕಾಡೂರು ಎಂಬ ಕುಗ್ರಾಮದ ನಿವಾಸಿಯಾಗಿರುವ ಡಾ. ಸೆಕೀಬಾ ಅಲಿ ಕಾಡೂರು ರಾಜೀವ ಗಾಂಧಿ ವಿವಿಯ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಎಂಡ್ ಎಂಡೋಡೋಂಟಿಕ್ಸ್ ವಿಷಯದಲ್ಲಿ ಎಂಡಿಎಸ್ ಪೂರೈಸಿದ್ದು ಮೊದಲ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ಬಿಡಿಎಸ್ ಅಧ್ಯಯನ ನಡೆಸಿದ್ದ ಸೆಕೀಬಾ, ಹಾಸನದ ಹಾಸನಾಂಬ ಡೆಂಟಲ್ ಕಾಲೇಜಿನಲ್ಲಿ ಎಂಡಿಎಸ್ ವಿದ್ಯಾರ್ಥಿನಿಯಾಗಿದ್ದರು.
ಈಕೆ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡೂರಿನ ಮೊಹಮ್ಮದ್ ಅಲಿ ಮತ್ತು ಜೊಹರಾ ಅಲಿ ದಂಪತಿಯ ಪುತ್ರಿ. ಹುಟ್ಟೂರು ಕಾಡೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಆರಂಭಿಸಿದ್ದ ಸೆಕೀಬಾ, ಗಡಿಭಾಗದ ಕುರುಡಪದವು ಪ್ರೌಢಶಾಲೆಯಲ್ಲಿ ಹೈಸ್ಕೂಲ್, ಆನಂತರ ವಿಟ್ಲದ ಪಿಯು ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದು ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ಗಿಟ್ಟಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಕನ್ನಡ ಮಾಧ್ಯಮದಲ್ಲಿ ಕಲಿತ ಹೆಣ್ಮಗಳು ಉನ್ನತ ಮಟ್ಟದ ಸಾಧನೆ ಮಾಡಿದ್ದು ಗಮನಾರ್ಹ.
ಅಂದಹಾಗೆ, ಕರಾವಳಿಯ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ವೈದ್ಯಕೀಯ ಕ್ಷೇತ್ರದಲ್ಲಿ ಗೋಲ್ಡ್ ಮೆಡಲ್ ಸಾಧನೆ ಮಾಡಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಈಕೆಯ ಸಾಧನೆಗೆ ಹಾಸನಾಂಬ ಕಾಲೇಜಿನ ಪ್ರಾಂಶುಪಾಲರು, ಸಿಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕುಟುಂಬಸ್ಥರು ಸಂತಸಗೊಂಡಿದ್ದಾರೆ.
Kasargod village girl Dr Sakiba Ali bags gold medal in MDS from RHGUS.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 02:06 pm
HK News Staffer
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm