ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm