ಬ್ರೇಕಿಂಗ್ ನ್ಯೂಸ್
18-02-22 02:40 pm HK Desk news ಕರಾವಳಿ
ಉಡುಪಿ, ಫೆ.18 : ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.
ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ನಮಗೆ ಹಿಜಾಬ್ ಮುಖ್ಯ, ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದು ಕಾಲೇಜು ಪ್ರಾಂಶುಪಾಲರಿಗೆ ಒತ್ತಡ ಹೇರಿದ್ದಾರೆ.

ಕಾಲೇಜಿನ ಸಿಬಂದಿ, ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದು ಎಲ್ಲರಿಗೂ ಪ್ರತ್ಯೇಕ ಕೊಠಡಿ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯೇ ಹಿಜಾಬ್ ತೆಗೆದು ಪರೀಕ್ಷೆ ಬರೆಯಿರಿ ಎಂದು ಹೊಸ ಅವಕಾಶ ನೀಡಿದ್ದಾರೆ. ಆದರೆ ಪ್ರಾಂಶುಪಾಲರ ಮನವಿಗೆ ಓಗೊಡದ ವಿದ್ಯಾರ್ಥಿಗಳು, ನಾವು ಇಡೀ ದಿನ ಕಾಲೇಜು ಗೇಟ್ ಬಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ನಮಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದಿದ್ದಾರೆ. ಆದರೆ ಕಾಲೇಜಿನ ಒಂದಷ್ಟು ವಿದ್ಯಾರ್ಥಿನಿಯರು ಕಾಲೇಜಿನ ಶಿಕ್ಷಕ ವೃಂದದ ಒತ್ತಾಯಕ್ಕೆ ಮಣಿದು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ.


ಇದೇ ವೇಳೆ, ಕಾಲೇಜಿನ ಹೊರಗಡೆಯ ಮಂದಿ ಇಲ್ಲಿಯೂ ಹಿಜಾಬ್ ಗಲಾಟೆ ಎಬ್ಬಿಸಬೇಕೆಂದು ಪ್ರಚೋದನೆ ಮಾಡಿದ್ದಾರೆ. ಅದರಿಂದಾಗಿ ನಾವು ಧರಣಿ ನಡೆಸಿದ್ದಾಗಿ ಕೆಲವು ವಿದ್ಯಾರ್ಥಿಗಳು, ಕಾಲೇಜು ಸಿಬಂದಿ ಬಳಿ ಹೇಳಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ಆಗದಂತೆ ನೋಡಿಕೊಂಡಿದ್ದಾರೆ.
The controversy over wearing Hijab in educational institutions spread to Milagres College, Kallianpur here on Friday February 18 with scores of students crowding at the college gate following confusion over the interim order regarding the headscarf. Muslim students, both girls and boys, were seen standing outside the college gate. Some of them were PU students and others pursuing undergraduation.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm