ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm