ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm