ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am