ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm