ಬ್ರೇಕಿಂಗ್ ನ್ಯೂಸ್
25-02-22 04:30 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಹಿಜಾಬ್ ಚಿಂತೆ ಬಿಡಿ. ಧರ್ಮಕ್ಕಿಂತ ಶಿಕ್ಷಣ ಮುಖ್ಯ ಎಂದು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಲಹೆ ಮಾಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರಯ್ಯಾ ಅಂಜುಮ್ ಅವರಿಗೆ ಅಪರಿಚಿತರು ಜೀವ ಬೆದರಿಕೆಯೊಡ್ಡಿದ್ದು ಈ ಬಗ್ಗೆ ಸುರೈಯ್ಯಾ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಹಿಜಾಬ್ ವಿವಾದ ಎದ್ದ ಬೆನ್ನಲ್ಲೇ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ 'ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣವೇ ನಮಗೆ ಮುಖ್ಯವಾಗಬೇಕು. ಧರ್ಮದ ಕಟ್ಟುಪಾಡು ಮನೆಯಲ್ಲಿ ಮಾತ್ರ ಇರಲಿ. ಶಾಲೆಗಳಲ್ಲಿ ಸಮವಸ್ತ್ರ ಧರಿಸಿ, ಶಿಕ್ಷಣ ಪಡೆಯಿರಿ. ಯಾರದೋ ದಾಳಕ್ಕೆ ಬಲಿಯಾಗಬೇಡಿ ಎಂದು ಸುರೈಯಾ ಫೇಸ್ಬುಕ್ ಲೈವ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ವಿವಾದದ ಹಿಂದೆ ಎಸ್ಡಿಪಿಐ ಇದ್ದು ಅವರ ತಂತ್ರಕ್ಕೆ ದಾಳವಾಗಿ ಶಿಕ್ಷಣ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದರು.
)
ಆದರೆ ಸುರೈಯಾ ಈ ಮಾತು ಹೇಳಿದ್ದು ಮುಸ್ಲಿಂ ಮೂಲಭೂತವಾದಿಗಳಿಗೆ ಹಿಡಿಸಿರಲಿಲ್ಲ. ಎಸ್ಡಿಪಿಐ ನಾಯಕರು ಟಿವಿ ಸಂವಾದದಲ್ಲಿ ಸುರೈಯಾಗೆ ಪ್ರಶ್ನೆ ಮಾಡಿದ್ದಲ್ಲದೆ, ಇದು ಕಾಂಗ್ರೆಸ್ ಹೇಳಿಕೆಯೇ ಎಂದು ಪ್ರಶ್ನೆ ಮಾಡಿದ್ದರು. ಅದೇ ಸಂದರ್ಭದಲ್ಲಿ ತನಗೆ ಅಪರಿಚಿತರಿಂದ, ವಿದೇಶಗಳಿಂದ ನಿರಂತರ ಫೋನ್ ಕರೆ ಬರುತ್ತಿರುವುದಾಗಿ ಟಿವಿ ಡಿಬೇಟ್ ನಲ್ಲಿ ಸುರೈಯಾ ಹೇಳಿಕೊಂಡಿದ್ದರು. ಇದೀಗ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು ಅಪರಿಚಿತರು ಫೋನ್, ಲೈವ್ ವಿಡಿಯೊ ಮುಖಾಂತರ ಮಾನಕ್ಕೆ ಕುಂದು ಉಂಟಾಗುವ ರೀತಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುತ್ತಾರೆ. ಮಾನಕ್ಕೆ ಕುಂದು ಉಂಟಾಗುವ ರೀತಿಯಲ್ಲಿ ಅಶ್ಲೀಲ ಚಿತ್ರಗಳು ಮತ್ತು ಸಂದೇಶಗಳನ್ನು ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ಗಳಲ್ಲಿ ಕಳಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ನಮ್ಮ ಧರ್ಮದ ಆಚರಣೆಗಳು ಮನೆಯಲ್ಲಿ ಇರಬೇಕೇ ವಿನಃ, ಬೀದಿಯಲ್ಲಿ ಇರೋದಲ್ಲ. ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯವೇ ಹೊರತು ಹಿಜಾಬ್ ಅಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರಯ್ಯಾ ಅಂಜುಮ್ ಹೇಳಿದ್ದರು. ಅಲ್ಲದೇ, ಪ್ರಸಕ್ತ ಉದ್ಭವವಾಗಿರುವ ಹಿಜಾಬ್ ಮತ್ತು ಕೇಸರಿ ವಿವಾದವು ಪಿಎಫ್ಐ ಮತ್ತು ಆರೆಸ್ಸೆಸ್ ಷಡ್ಯಂತ್ರ. ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗಬಾರದು. ಹಿಜಾಬ್ ಹೆಸರಿನಲ್ಲಿ ಶಾಲೆಯ ಹೊರಗೆ, ಬೀದಿಯಲ್ಲಿ ನಿಂತರೆ ನಮಗೇ ನಷ್ಟ ಎಂಬುದನ್ನು ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.
Surayya Anjum, a Congress leader who issued a statement relating to wearing of the HIjabs reportedly has received threats to her life. She has registered a complaint in the women's police station in the city relating to the incident.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm