ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm