ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm