ಬ್ರೇಕಿಂಗ್ ನ್ಯೂಸ್
28-02-22 11:45 pm Mangalore Correspondent ಕರಾವಳಿ
ಮಂಗಳೂರು, ಫೆ. 28 : ಶಿರಾಡಿ ಘಾಟ್ ಕರಾವಳಿ ಭಾಗದ ಪ್ರಮುಖ ಸಂಚಾರ ಮಾರ್ಗವಾಗಿದ್ದು, ಇಲ್ಲಿ ಏಳು ಸುರಂಗ ಸಹಿತ ಹೆದ್ದಾರಿ ಮಾರ್ಗವನ್ನು 14 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ತಜ್ಞರ ವರದಿ ಪಡೆದು ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕುಲಶೇಖರದ ಕೊರ್ಡೆಲ್ ಹಾಲ್ನಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 3163 ಕೋಟಿ ರೂ. ಮೊತ್ತದಲ್ಲಿ 164 ಕಿ.ಮೀ. ಉದ್ದದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ್ ಮಾಲಾ ಯೋಜನೆಯಡಿ ಎರಡು ಸಾವಿರ ಕೋಟಿ ರೂ. ವೆಚ್ಚದಲ್ಲಿ ನವಮಂಗಳೂರು, ಕಾರವಾರ ಬಂದರುಗಳ ಅಭಿವೃದ್ಧಿ ಪಡಿಸಲಾಗುವುದು. ಬೆಂಗಳೂರು- ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯ 26 ಕಿ.ಮೀ. ರಸ್ತೆಯನ್ನು ಚತುಷ್ಪಥವಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ 14 ರೈಲ್ವೇ ಮೇಲ್ಸೇತುವೆ (ಆರ್ಒಬಿ)ಗಳಿಗೆ ಮಂಜೂರಾತಿ ನೀಡುತ್ತಿದ್ದು, ಅದರ ಪಟ್ಟಿಯನ್ನು ಸಂಸದ ನಳಿನ್ ಕುಮಾರ್ಗೆ ನೀಡುವುದಾಗಿ ಹೇಳಿದ ಅವರು, ಮಂಗಳೂರಿಗೆ ಶೀಘ್ರದಲ್ಲಿ ರಿಂಗ್ ರೋಡ್ ಸೌಲಭ್ಯ ಸಿಗಲಿದೆ, ನಂತೂರು ಫ್ಲೈಓವರ್ಗೂ ಅನುಮತಿ ನೀಡುವುದಾಗಿ ಗಡ್ಕರಿ ಹೇಳಿದರು.

ಸುರತ್ಕಲ್ ಟೋಲ್ ರದ್ದು ಬಗ್ಗೆ ದೆಹಲಿಯಲ್ಲಿ ಸಭೆ
ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಪ್ಲಾಝಾ ರದ್ದುಗೊಳಿಸಲು ಕಾನೂನು ತೊಡಕುಗಳಿವೆ. ಈ ಸಮಸ್ಯೆ ಬಗೆಹರಿಸಲು ಶೀಘ್ರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್, ಸುರತ್ಕಲ್ ನಲ್ಲಿರುವ ಟೋಲ್ ಗೇಟ್ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಟೋಲ್ ಗೇಟನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡುತ್ತಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕೈಮುಗಿದು ಸಚಿವ ಗಡ್ಕರಿ ಅವರಲ್ಲಿ ಕೇಳಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಈ ಕಾರ್ಯಕ್ರಮದ ಸುದ್ದಿಗೋಷ್ಟಿಯಲ್ಲಿ ಟೋಲ್ ಗೇಟ್ ರದ್ದುಗೊಳಿಸಲು ಕಾನೂನು ತೊಡಕಿದೆ, ರದ್ದುಗೊಳಿಸುತ್ತೇನೆ ಎಂದು ತಾನು ಹೇಳಿಯೇ ಇಲ್ಲ ಎಂದಿದ್ದರು. ಜನಾಭಿಪ್ರಾಯ, ಒತ್ತಡಕ್ಕೆ ಮಣಿದ ಸಂಸದ ನಳಿನ್ ಕುಮಾರ್, ಇಂದು ಸಚಿವ ಗಡ್ಕರಿ ಅವರಲ್ಲಿ ಕೈಮುಗಿದು ಕೇಳಿಕೊಂಡಿದ್ದು ವಿಶೇಷವಾಗಿತ್ತು.
Mangalore MP Nalin Kumar Kateel requests Gadkari to close Surathkal Toll also 14 thousand crores sanctioned for shiradhi that re construction. A continuous protest was held against illegal toll at surathkal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm