ಬ್ರೇಕಿಂಗ್ ನ್ಯೂಸ್
28-02-22 11:45 pm Mangalore Correspondent ಕರಾವಳಿ
ಮಂಗಳೂರು, ಫೆ. 28 : ಶಿರಾಡಿ ಘಾಟ್ ಕರಾವಳಿ ಭಾಗದ ಪ್ರಮುಖ ಸಂಚಾರ ಮಾರ್ಗವಾಗಿದ್ದು, ಇಲ್ಲಿ ಏಳು ಸುರಂಗ ಸಹಿತ ಹೆದ್ದಾರಿ ಮಾರ್ಗವನ್ನು 14 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ತಜ್ಞರ ವರದಿ ಪಡೆದು ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕುಲಶೇಖರದ ಕೊರ್ಡೆಲ್ ಹಾಲ್ನಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 3163 ಕೋಟಿ ರೂ. ಮೊತ್ತದಲ್ಲಿ 164 ಕಿ.ಮೀ. ಉದ್ದದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ್ ಮಾಲಾ ಯೋಜನೆಯಡಿ ಎರಡು ಸಾವಿರ ಕೋಟಿ ರೂ. ವೆಚ್ಚದಲ್ಲಿ ನವಮಂಗಳೂರು, ಕಾರವಾರ ಬಂದರುಗಳ ಅಭಿವೃದ್ಧಿ ಪಡಿಸಲಾಗುವುದು. ಬೆಂಗಳೂರು- ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯ 26 ಕಿ.ಮೀ. ರಸ್ತೆಯನ್ನು ಚತುಷ್ಪಥವಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ದ.ಕ. ಜಿಲ್ಲೆಯಲ್ಲಿ 14 ರೈಲ್ವೇ ಮೇಲ್ಸೇತುವೆ (ಆರ್ಒಬಿ)ಗಳಿಗೆ ಮಂಜೂರಾತಿ ನೀಡುತ್ತಿದ್ದು, ಅದರ ಪಟ್ಟಿಯನ್ನು ಸಂಸದ ನಳಿನ್ ಕುಮಾರ್ಗೆ ನೀಡುವುದಾಗಿ ಹೇಳಿದ ಅವರು, ಮಂಗಳೂರಿಗೆ ಶೀಘ್ರದಲ್ಲಿ ರಿಂಗ್ ರೋಡ್ ಸೌಲಭ್ಯ ಸಿಗಲಿದೆ, ನಂತೂರು ಫ್ಲೈಓವರ್ಗೂ ಅನುಮತಿ ನೀಡುವುದಾಗಿ ಗಡ್ಕರಿ ಹೇಳಿದರು.
ಸುರತ್ಕಲ್ ಟೋಲ್ ರದ್ದು ಬಗ್ಗೆ ದೆಹಲಿಯಲ್ಲಿ ಸಭೆ
ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಪ್ಲಾಝಾ ರದ್ದುಗೊಳಿಸಲು ಕಾನೂನು ತೊಡಕುಗಳಿವೆ. ಈ ಸಮಸ್ಯೆ ಬಗೆಹರಿಸಲು ಶೀಘ್ರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್, ಸುರತ್ಕಲ್ ನಲ್ಲಿರುವ ಟೋಲ್ ಗೇಟ್ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಟೋಲ್ ಗೇಟನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡುತ್ತಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕೈಮುಗಿದು ಸಚಿವ ಗಡ್ಕರಿ ಅವರಲ್ಲಿ ಕೇಳಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಈ ಕಾರ್ಯಕ್ರಮದ ಸುದ್ದಿಗೋಷ್ಟಿಯಲ್ಲಿ ಟೋಲ್ ಗೇಟ್ ರದ್ದುಗೊಳಿಸಲು ಕಾನೂನು ತೊಡಕಿದೆ, ರದ್ದುಗೊಳಿಸುತ್ತೇನೆ ಎಂದು ತಾನು ಹೇಳಿಯೇ ಇಲ್ಲ ಎಂದಿದ್ದರು. ಜನಾಭಿಪ್ರಾಯ, ಒತ್ತಡಕ್ಕೆ ಮಣಿದ ಸಂಸದ ನಳಿನ್ ಕುಮಾರ್, ಇಂದು ಸಚಿವ ಗಡ್ಕರಿ ಅವರಲ್ಲಿ ಕೈಮುಗಿದು ಕೇಳಿಕೊಂಡಿದ್ದು ವಿಶೇಷವಾಗಿತ್ತು.
Mangalore MP Nalin Kumar Kateel requests Gadkari to close Surathkal Toll also 14 thousand crores sanctioned for shiradhi that re construction. A continuous protest was held against illegal toll at surathkal.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm