ಬ್ರೇಕಿಂಗ್ ನ್ಯೂಸ್
02-03-22 02:24 pm Udupi Correspondent ಕರಾವಳಿ
ಉಡುಪಿ, ಮಾ.2: ಕೊಲೆಯಾದ ಹರ್ಷನ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಅಭ್ಯರ್ಥಿ ನಿಲ್ಲಿಸಲ್ಲ ಎಂದು ಕಾಂಗ್ರೆಸ್ ನಾಯಕರು ಟಾಂಗ್ ನೀಡಿರುವುದಕ್ಕೆ ಗರಂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಟಿಕೆಟ್ ಬಗ್ಗೆ ಹೇಳುವುದಕ್ಕೆ ಕಾಂಗ್ರೆಸಿಗರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಯಾವುದೇ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸಲು ನಮ್ಮ ಹೈಕಮಾಂಡ್ ಇದೆ. ಅದರ ಬಗ್ಗೆ ನಮ್ಮ ಪಾರ್ಟಿ, ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನವರು ನಮ್ಮ ವ್ಯವಸ್ಥೆ ಬಗ್ಗೆ ಹೇಳಬೇಕಾಗಿಲ್ಲ. ಹರ್ಷನ ಕುಟುಂಬದ ಪೂರ್ತಿ ಜವಾಬ್ದಾರಿಯನ್ನು ಪಕ್ಷ ಮತ್ತು ನಮ್ಮ ಸರಕಾರ ತೆಗೆದುಕೊಂಡಿದೆ. ಕೊಲೆ ಆರೋಪಿಗಳನ್ನು ಬಂಧಿಸಿದ್ದು ಇನ್ನೆಂದೂ ಈ ರೀತಿಯ ಕೊಲೆಗಳು ಆಗದಂತೆ ನೋಡಿಕೊಳ್ಳುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತದೆ.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದು ಕಾರ್ಯಕರ್ತರ ಹತ್ಯೆಗಳಾಗಿದ್ದವು. ಇವರು ಎಷ್ಟು ಮಂದಿಗೆ ಸಾಂತ್ವನ ಹೇಳಿದ್ದಾರೆ. ಎಷ್ಟು ಪರಿಹಾರ ಕೊಟ್ಟಿದ್ದಾರೆ, ಆ ಮನೆಯವರಿಗೆ ಏನು ವ್ಯವಸ್ಥೆ ಮಾಡಿದ್ದಾರೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಆಗ ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕು. ಸರಣಿ ಹತ್ಯೆಗಳು ಆಗಿದ್ದರೂ ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿದ್ದೀರಿ. ನೀವು ಅವರ ಕೇಸ್ ವಾಪಾಸು ಪಡೆಯದೇ ಇರುತ್ತಿದ್ದರೆ, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡದೇ ಇರುತ್ತಿದ್ದರೆ ಇವತ್ತು ಹರ್ಷನ ಕೊಲೆ ಕೃತ್ಯ ನಡೆಯುತ್ತಿರಲಿಲ್ಲ ಎಂದು ಸಚಿವ ಕೋಟ ವಾಗ್ದಾಳಿ ನಡೆಸಿದರು.
ನಮ್ಮ ಸರಕಾರ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ. ಹರ್ಷ ಪ್ರಕರಣದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡುತ್ತೇವೆ. ಕೊಲೆ ಕೃತ್ಯದ ಹಿಂದಿನ ಷಡ್ಯಂತ್ರವನ್ನು ಹೊರಗೆ ತರುತ್ತೇವೆ. ಯಾವತ್ತೂ ಅವರು ಕೈ ಎತ್ತದಂತೆ ಮಾಡುತ್ತೇವೆ. ಆರೋಪಿಗಳಿಗೆ ರಿಯಾಯಿತಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟ ಹೇಳಿದರು.
Who are congress leaders to plead for ticket for Harsha family slams Kota poojary in Udupi.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm