ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm