ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm