ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm