ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
07-01-26 12:12 pm
Bangalore Correspondent
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm