ಬ್ರೇಕಿಂಗ್ ನ್ಯೂಸ್
02-03-22 09:43 pm Mangalore Correspondent ಕರಾವಳಿ
ಮಂಗಳೂರು, ಮಾ.2: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಕೊಟ್ಟಾರ - ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ "ಬೃಹತ್ ಉದ್ಯೋಗ ಮೇಳ" ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ ಮೂರು ಕಂಪನಿಗಳನ್ನು ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥ ನಾರಾಯಣ್ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.
AJ engineering college to hold Udyoga Mela, more than hundreds of companies to participate.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm