ಬ್ರೇಕಿಂಗ್ ನ್ಯೂಸ್
06-03-22 12:58 pm Mangalore Correspondent ಕರಾವಳಿ
ಉಳ್ಳಾಲ, ಮಾ.6: ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಇಂದು ನೂತನ ಬ್ರಹ್ಮರಥ ಸಮರ್ಪಣೆಯಾಗಲಿದ್ದು, ಮಾ. 10 ರಂದು ಬ್ರಹ್ಮರಥ ಕಲಶಾಭಿಷೇಕ ನಡೆಯಲಿದೆ.
ಕರ್ನಾಟಕ ಮತ್ತು ಕೇರಳ ಗಡಿ ಪ್ರದೇಶ ತಲಪಾಡಿ ಗ್ರಾಮದ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರವು ಪುರಾಣ ಪ್ರಸಿದ್ಧವಾಗಿದ್ದು , ಸಹಸ್ರಾರು ಭಕ್ತಾದಿಗಳ ಶ್ರದ್ಧಾಕೇಂದ್ರವಾಗಿರುತ್ತದೆ. ಈ ಕ್ಷೇತ್ರವು ತಲಪಾಡಿ, ಕಿನ್ಯಾ, ಕೋಟೆಕಾರು ಗಾಮಕ್ಕೊಳಪಟ್ಟ ಗ್ರಾಮ ದೇವಸ್ಥಾನವಾಗಿದ್ದು ಇಲ್ಲಿ ಕಳೆದ 2015 ರಲ್ಲಿ ಪೂರ್ಣ ಪ್ರಮಾಣದಲ್ಲಿ ಜೀರ್ಣೋದ್ಧಾರ, ವೈಭವದ ಬ್ರಹ್ಮಕಲಶೋತ್ಸವ ನಡೆದಿರುತ್ತದೆ. ಸುಮಾರು ಐದಾರು ಶತಮಾನಗಳ ಹಿಂದಿನ ರಥವು ಶಿಥಿಲಗೊಂಡಿದ್ದು , ಕಳೆದ ಜೀರ್ಣೋದ್ದಾರ ಸಂದರ್ಭದಲ್ಲಿ ಅದರ ಪುನರ್ ನಿರ್ಮಾಣ ಕಾರ್ಯಕ್ಕೆ ಸಮಯಾವಕಾಶದ ಕೊರತೆಯಿಂದಾಗಿ ನಿರ್ಮಿಸಲು ಅಸಾಧ್ಯವಾಗಿತ್ತು.

ಕ್ಷೇತ್ರದ ಭಕ್ತಾದಿಗಳು ಸೇರಿ ರಾಮ್ ಮನೋಹರ ರೈ ಅವರ ನೇತೃತ್ವದಲ್ಲಿ ಬ್ರಹ್ಮರಥ ನಿರ್ಮಾಣ ಸಮಿತಿಯನ್ನು ರಚಿಸಿ, ಬ್ರಹ್ಮರಥ ನಿರ್ಮಾಣದ ಸಂಕಲ್ಪ ಮಾಡಲಾಗಿ 2023 ಮಾರ್ಚ್ ತಿಂಗಳಲ್ಲಿ ನಡೆಯುವ ವಾರ್ಷಿಕ ಜಾತ್ರೆಯ ಮೊದಲು ಸಮರ್ಪಿಸುವುದೆಂದು ತೀರ್ಮಾನಿಸಲಾಗಿತ್ತು. ಆದರೆ ಶ್ರೀ ದೇವಿಯ ಸಂಕಲ್ಪದಂತೆ ದೇವರ ಅನುಗ್ರಹದಿಂದ ಈ ವರ್ಷವೇ ಬ್ರಹ್ಮರಥ ನಿರ್ಮಿಸಿ ದೇವರಿಗೆ ಸಮರ್ಪಣೆ ಮಾಡುವ ಅವಕಾಶ ದೊರಕಿರುವುದು ಶ್ರೀ ಕ್ಷೇತ್ರದ ಭಕ್ತಾದಿಗಳ ಸೌಭಾಗ್ಯವೆಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮೋಹನ್ದಾಸ್ ಶೆಟ್ಟಿ ನೆತ್ತಿಲಬಾಳಿಕೆ ಹೇಳಿದರು.

ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ರಹ್ಮರಥ ನಿರ್ಮಾಣ ಕಾರ್ಯವು ಕೋಟೇಶ್ವರ ವಿಶ್ವಕರ್ಮ ಶಿಲ್ಪಕಲಾ ಶಾಲೆಯ ಶ್ರೀ ಲಕ್ಷ್ಮಿ ನಾರಾಯಣ ಆಚಾರ್ಯ ಕೋಟೇಶ್ವರ ಇವರ ನೇತೃತ್ವದಲ್ಲಿ ಅಂತಿಮ ಹಂತದಲ್ಲಿದೆ. ಬ್ರಹ್ಮರಥ ಇಂದು ಸಂಜೆ 3 ಗಂಟೆಗೆ ಕೋಟೆಕಾರು ಬೀರಿ ಶ್ರೀ ಗಣೇಶ ಮಂದಿರದಿಂದ ವೈಭವದ ಶೋಭಾಯಾತ್ರೆಯೊಂದಿಗೆ ಹೊರಡಲಿದ್ದು , ಸಂಜೆ 6 ಗಂಟೆಗೆ ಶ್ರೀ ಕ್ಷೇತ್ರಕ್ಕೆ ತಲುಪಿ ಸಮರ್ಪಣಾ ಕಾರ್ಯ ನಡೆಯಲಿದೆ. ಸಂಜೆ ಉಡುಪಿ ಪೇಜಾವರ ಅಧೋಕ್ಷಜ ಮಠದ ಯತಿಗಳಾದ ಶ್ರೀ ವಿಶ್ವಪ್ರಸನ್ನ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 9 ರಂದು ರಾತ್ರಿ ವಾಸ್ತು ಪೂಜೆ ಮತ್ತು ಇನ್ನಿತರ ಧಾರ್ಮಿಕ ವಿಧಿ ವಿಧಾನಗಳು ನಡೆದು ಮರುದಿನ ಬೆಳಗ್ಗೆ 9.45 ರಿಂದ ಚಂಡಿಕಾಯಾಗ ಮತ್ತು ಬ್ರಹ್ಮರಥ ಕಲಶಾಭಿಷೇಕ ನಡೆಯಲಿದೆ. ಅದೇ ದಿನ ಬೆಳಗ್ಗೆ 10 ಗಂಟೆಗೆ ದೇವಿಪುರದ ಬಳಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ತಲಪಾಡಿ ದೊಡ್ಡಮನೆ ದಿವಂಗತ ಟಿ. ಐತಪ್ಪ ರೈಯವರ ಪತ್ನಿ ಶ್ರೀಮತಿ ಜಯಂತಿ ರೈ ಮತ್ತು ಮಕ್ಕಳು ನಿರ್ಮಿಸಿಕೊಟ್ಟಿರುವ ದೇವಸ್ಥಾನದ ಮಹಾದ್ವಾರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಬ್ರಹ್ಮರಥ ಸಮಿತಿ ಅಧ್ಯಕ್ಷ ರಾಮಮನೋಹರ್ ರೈ , ಕಾರ್ಯದರ್ಶಿ ವಸಂತ ದೇವಾಡಿಗ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಪ್ರದೀಪ್ ಕಿಲ್ಲೆ, ಸಭಾ ಕಾರ್ಯಕ್ರಮ ಸಂಚಾಲಕ ಗೋಪಾಲಕೃಷ್ಣ ಮೇಲಾಂಟ, ತಲಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಪ್ರಚಾರ ಸಮಿತಿ ಸಂಚಾಲಕ ಸುರೇಶ್ ಆಳ್ವ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Mangalore Bhramararatha at Durga Parameshwari Temple at Ullal. On March at 10th Bhramararatha abisheka to be held.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm