ಬ್ರೇಕಿಂಗ್ ನ್ಯೂಸ್
08-03-22 01:29 pm Mangalore Correspondent ಕರಾವಳಿ
ಉಳ್ಳಾಲ, ಮಾ.8: ಖಾಸಗಿ ಜಾಗದಲ್ಲಿ ತೆರೆದ ಸ್ಥಿತಿಯಲ್ಲಿರುವ ಆಳ ಬಾವಿಯೊಂದಕ್ಕೆ ಮೇಯಲು ಬಂದ ಹಸು ಮತ್ತು ಕರು ಬಿದ್ದು ಒದ್ದಾಡಿದ ಪ್ರಸಂಗ ನಡೆದಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಮೂಕ ಪ್ರಾಣಿಗಳನ್ನ ಮೇಲಕ್ಕೆತ್ತಿ ಮರುಜೀವ ನೀಡಿದ ಘಟನೆ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರದ ಬಳಿ ಮಹಮ್ಮದ್ ಹ್ಯಾರಿಸ್ ಎಂಬವರಿಗೆ ಸೇರಿದ ಖಾಲಿ ಜಮೀನಿನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಹ್ಯಾರಿಸ್ ಅವರ ಖಾಲಿ ಜಮೀನಿಗೆ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ. ಕಳೆದ ಹತ್ತು ವರುಷದಿಂದ ಜಮೀನಿನಲ್ಲಿರುವ ಆಳ ಬಾವಿಗೂ ಆವರಣ ಗೋಡೆ ನಿರ್ಮಿಸಿಲ್ಲ. ಬಾವಿಯ ಸುತ್ತಲೂ ಗಿಡ ಗಂಟೆಗಳು ಬೆಳೆದಿದ್ದು ಬಾವಿಯ ಇರುವಿಕೆ ಮೂಕ ಪ್ರಾಣಿ ಬಿಡಿ ಮನುಷ್ಯರಿಗೂ ತಿಳಿಯದಾಗಿತ್ತು. ಸೋಮವಾರ ಸಂಜೆ ಚೆಂಬುಗುಡ್ಡೆಯ ಸಾಹುಲ್ ಎಂಬವರ ಸಾಕು ದನ ಮತ್ತು ಅದರ ಕರು ಇಲ್ಲಿಗೆ ಮೇಯಲು ಬಂದು ಆಳ ಬಾವಿಯೊಳಗೆ ಬಿದ್ದಿದೆ. ಬಾವಿಯೊಳಗೆ ಕರು, ಹಸು ಬಿದ್ದುದನ್ನ ಹೊರಗಿದ್ದ ಕರುವು ಕಂಡಿದ್ದು ರೋದಿಸಲು ಆರಂಭಿಸಿದೆ. ಪಶುಗಳ ರೋದನದಿಂದ ಪರಿಸರ ವಾಸಿಗಳಿಗೆ ವಿಚಾರ ತಿಳಿದು ಅಗ್ನಿ ಶಾಮಕ ದಳವರನ್ನ ಸ್ಥಳಕ್ಕೆ ಕರೆಸಿದ್ದಾರೆ.




ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಸು ಮತ್ತು ಕರುವನ್ನ ಮೇಲಕ್ಕೆತ್ತಿದ್ದಾರೆ. ಹಸು ಸ್ವಲ್ಪ ಅಸ್ವಸ್ಥಗೊಂಡಿದ್ದು ಕರು ಆರೋಗ್ಯವಾಗಿದೆ. ಆವರಣ ಗೋಡೆ ಇಲ್ಲದ ಜಾಗದಲ್ಲಿ ಬಾವಿಯನ್ನ ತೆರೆದಿಟ್ಟು ಉದ್ಧಟತನ ತೋರುತ್ತಿರುವ ಮಹಮ್ಮದ್ ಹ್ಯಾರಿಸ್ ವಿರುದ್ಧ ಸಂಬಂಧಪಟ್ಟ ಸೋಮೇಶ್ವರ ಪುರಸಭಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಇಲ್ಲಿ ಮುಂದೆಯೂ ಅನಾಹುತಗಳು ನಡೆಯುವ ಸಾಧ್ಯತೆಗಳು ಇದೆ.
Cow and calf fall into the open well at Pillar in Mangalore fire service come to rescue. As the owners haven't created any fense or wall surrounding the well accidentally both Cow and Calf haven into the deep open well.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm