ಬ್ರೇಕಿಂಗ್ ನ್ಯೂಸ್
08-03-22 01:29 pm Mangalore Correspondent ಕರಾವಳಿ
ಉಳ್ಳಾಲ, ಮಾ.8: ಖಾಸಗಿ ಜಾಗದಲ್ಲಿ ತೆರೆದ ಸ್ಥಿತಿಯಲ್ಲಿರುವ ಆಳ ಬಾವಿಯೊಂದಕ್ಕೆ ಮೇಯಲು ಬಂದ ಹಸು ಮತ್ತು ಕರು ಬಿದ್ದು ಒದ್ದಾಡಿದ ಪ್ರಸಂಗ ನಡೆದಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಮೂಕ ಪ್ರಾಣಿಗಳನ್ನ ಮೇಲಕ್ಕೆತ್ತಿ ಮರುಜೀವ ನೀಡಿದ ಘಟನೆ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರದ ಬಳಿ ಮಹಮ್ಮದ್ ಹ್ಯಾರಿಸ್ ಎಂಬವರಿಗೆ ಸೇರಿದ ಖಾಲಿ ಜಮೀನಿನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಹ್ಯಾರಿಸ್ ಅವರ ಖಾಲಿ ಜಮೀನಿಗೆ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ. ಕಳೆದ ಹತ್ತು ವರುಷದಿಂದ ಜಮೀನಿನಲ್ಲಿರುವ ಆಳ ಬಾವಿಗೂ ಆವರಣ ಗೋಡೆ ನಿರ್ಮಿಸಿಲ್ಲ. ಬಾವಿಯ ಸುತ್ತಲೂ ಗಿಡ ಗಂಟೆಗಳು ಬೆಳೆದಿದ್ದು ಬಾವಿಯ ಇರುವಿಕೆ ಮೂಕ ಪ್ರಾಣಿ ಬಿಡಿ ಮನುಷ್ಯರಿಗೂ ತಿಳಿಯದಾಗಿತ್ತು. ಸೋಮವಾರ ಸಂಜೆ ಚೆಂಬುಗುಡ್ಡೆಯ ಸಾಹುಲ್ ಎಂಬವರ ಸಾಕು ದನ ಮತ್ತು ಅದರ ಕರು ಇಲ್ಲಿಗೆ ಮೇಯಲು ಬಂದು ಆಳ ಬಾವಿಯೊಳಗೆ ಬಿದ್ದಿದೆ. ಬಾವಿಯೊಳಗೆ ಕರು, ಹಸು ಬಿದ್ದುದನ್ನ ಹೊರಗಿದ್ದ ಕರುವು ಕಂಡಿದ್ದು ರೋದಿಸಲು ಆರಂಭಿಸಿದೆ. ಪಶುಗಳ ರೋದನದಿಂದ ಪರಿಸರ ವಾಸಿಗಳಿಗೆ ವಿಚಾರ ತಿಳಿದು ಅಗ್ನಿ ಶಾಮಕ ದಳವರನ್ನ ಸ್ಥಳಕ್ಕೆ ಕರೆಸಿದ್ದಾರೆ.




ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಸು ಮತ್ತು ಕರುವನ್ನ ಮೇಲಕ್ಕೆತ್ತಿದ್ದಾರೆ. ಹಸು ಸ್ವಲ್ಪ ಅಸ್ವಸ್ಥಗೊಂಡಿದ್ದು ಕರು ಆರೋಗ್ಯವಾಗಿದೆ. ಆವರಣ ಗೋಡೆ ಇಲ್ಲದ ಜಾಗದಲ್ಲಿ ಬಾವಿಯನ್ನ ತೆರೆದಿಟ್ಟು ಉದ್ಧಟತನ ತೋರುತ್ತಿರುವ ಮಹಮ್ಮದ್ ಹ್ಯಾರಿಸ್ ವಿರುದ್ಧ ಸಂಬಂಧಪಟ್ಟ ಸೋಮೇಶ್ವರ ಪುರಸಭಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಇಲ್ಲಿ ಮುಂದೆಯೂ ಅನಾಹುತಗಳು ನಡೆಯುವ ಸಾಧ್ಯತೆಗಳು ಇದೆ.
Cow and calf fall into the open well at Pillar in Mangalore fire service come to rescue. As the owners haven't created any fense or wall surrounding the well accidentally both Cow and Calf haven into the deep open well.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm