ಬ್ರೇಕಿಂಗ್ ನ್ಯೂಸ್
21-09-20 06:26 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡುಪಿಯಲ್ಲಿ ಎರಡು ದಿನಗಳಲ್ಲಿ ಸುರಿದ ದಾಖಲೆ ಪ್ರಮಾಣದ ಮಳೆ ಯಾವೆಲ್ಲ ಅನಾಹುತಗಳನ್ನು ಮಾಡಿದೆ ಅಂದರೆ ಅದನ್ನು ಊಹಿಸೋಕು ಸಾಧ್ಯವಿಲ್ಲ. ಅದಕ್ಕೆ ಒಂದು ಸಣ್ಣ ಉದಾಹರಣೆ ಕಾಪು ಬೀಚ್ ನಲ್ಲಿದ್ದ ಬ್ರಿಟಿಷರ ಕಾಲದ ದೀಪಸ್ತಂಭ ಬಳಿಯ ದೃಶ್ಯ.
ಕಾಪು ಬೀಚ್ ಬಳಿಯ ಲೈಟ್ ಹೌಸ್ ಕನ್ನಡ, ತುಳು ಸಿನಿಮಾ ಚಿತ್ರೀಕರಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದ ಜಾಗ. ಅಪೂರ್ವ ಸೌಂದರ್ಯದಿಂದ ವೀವ್ ಸ್ಪಾಟ್ ಆಗಿದ್ದ ಕಾಪು ದೀಪಸ್ತಂಭದತ್ತ ಇನ್ನು ಸುಳಿದಾಡುವುದು ಬಿಡಿ. ಅದರ ಬಳಿಗೆ ಹೋಗುವುದೇ ಡೇಂಜರ್ ಅನ್ನುವಂತಾಗಿದೆ. ಯಾಕಂದ್ರೆ, ಎರಡು ದಿನಗಳ ಮಳೆಯಿಂದ ಭೋರ್ಗರೆದ ನದಿಗಳು ಸಮುದ್ರ ಸೇರಲು ಜಾಗ ಸಾಲದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಸಮುದ್ರದತ್ತ ನುಗ್ಗಿದೆ. ಲೌಟ್ ಹೌಸ್ ಹಿಂಭಾಗದಿಂದ ಸಮುದ್ರ ಸೇರುತ್ತಿದ್ದ ನದಿ ತನ್ನ ಪಥವನ್ನೇ ಬದಲಿಸಿದ್ದು ದೀಪಸ್ತಂಭದತ್ತ ತೆರಳುವ ಕಾಲುದಾರಿಯನ್ನೇ ಕಬಳಿಸಿಕೊಂಡು ಮುಂಭಾಗದಿಂದ ಹರಿಯಲಾರಂಭಿಸಿದೆ. ಕಾಲು ದಾರಿ ಕೊಚ್ಚಿಹೋಗಿದ್ದು, ಎರಡೂ ಭಾಗಗಳಿಂದ ಸಮುದ್ರ ಕೊರೆತ ಉಂಟಾದಲ್ಲಿ ದೀಪಸ್ತಂಭವೇ ಸಮುದ್ರ ಪಾಲಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕಾಪು ಬೀಚ್ ನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಲೈಟ್ ಹೌಸ್ನ ಹಿಂಭಾಗದಲ್ಲಿ ನದಿ ಸಮುದ್ರ ಸೇರ್ತಾ ಇತ್ತು. ಭಾರೀ ಮಳೆಯಿಂದಾಗಿ ನದಿ ಪಾತ್ರವೇ ಬದಲಾಗಿದ್ದು, ನೆರೆ ನೀರು ತನ್ನ ಪಥವನ್ನೇ ಬದಲಿಸಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಾಪು ಬಳಿಯ ಪಡು ಗ್ರಾಮ, ಗರಡಿ ಪ್ರದೇಶ, ಸುಬ್ಬಯ್ಯ ತೋಟ, ಬೈರು ಗುತ್ತುತೋಟ ಸೇರಿದಂತೆ ಆಸುಪಾಸಿನ ಭಾಗದಲ್ಲಿ ಎಲ್ಲೆಂದರಲ್ಲಿ ಹರಿಯುತ್ತಿರುವ ನದಿ ನೀರು ಲೈಟ್ ಹೌಸ್ ಮುಂಭಾಗದಿಂದಲೇ ಸಮುದ್ರ ಸೇರುತ್ತಿದೆ. ಇದರಿಂದ ದೀಪಸ್ತಂಭದತ್ತ ಹೋಗಲು ದಾರಿ ಇಲ್ಲದಾಗಿದ್ದು, ಅಲ್ಲದೆ ನೆರೆನೀರು ಇದೇ ರೀತಿ ಹರಿದರೆ ಲೈಟ್ ಹೌಸ್ ಏರುವ ಮೆಟ್ಟಲುಗಳು ಕೊಚ್ಚಿ ಹೋಗುವ ಸಾಧ್ಯತೆ ಇದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm