ಬ್ರೇಕಿಂಗ್ ನ್ಯೂಸ್
21-09-20 06:26 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡುಪಿಯಲ್ಲಿ ಎರಡು ದಿನಗಳಲ್ಲಿ ಸುರಿದ ದಾಖಲೆ ಪ್ರಮಾಣದ ಮಳೆ ಯಾವೆಲ್ಲ ಅನಾಹುತಗಳನ್ನು ಮಾಡಿದೆ ಅಂದರೆ ಅದನ್ನು ಊಹಿಸೋಕು ಸಾಧ್ಯವಿಲ್ಲ. ಅದಕ್ಕೆ ಒಂದು ಸಣ್ಣ ಉದಾಹರಣೆ ಕಾಪು ಬೀಚ್ ನಲ್ಲಿದ್ದ ಬ್ರಿಟಿಷರ ಕಾಲದ ದೀಪಸ್ತಂಭ ಬಳಿಯ ದೃಶ್ಯ.
ಕಾಪು ಬೀಚ್ ಬಳಿಯ ಲೈಟ್ ಹೌಸ್ ಕನ್ನಡ, ತುಳು ಸಿನಿಮಾ ಚಿತ್ರೀಕರಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದ ಜಾಗ. ಅಪೂರ್ವ ಸೌಂದರ್ಯದಿಂದ ವೀವ್ ಸ್ಪಾಟ್ ಆಗಿದ್ದ ಕಾಪು ದೀಪಸ್ತಂಭದತ್ತ ಇನ್ನು ಸುಳಿದಾಡುವುದು ಬಿಡಿ. ಅದರ ಬಳಿಗೆ ಹೋಗುವುದೇ ಡೇಂಜರ್ ಅನ್ನುವಂತಾಗಿದೆ. ಯಾಕಂದ್ರೆ, ಎರಡು ದಿನಗಳ ಮಳೆಯಿಂದ ಭೋರ್ಗರೆದ ನದಿಗಳು ಸಮುದ್ರ ಸೇರಲು ಜಾಗ ಸಾಲದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಸಮುದ್ರದತ್ತ ನುಗ್ಗಿದೆ. ಲೌಟ್ ಹೌಸ್ ಹಿಂಭಾಗದಿಂದ ಸಮುದ್ರ ಸೇರುತ್ತಿದ್ದ ನದಿ ತನ್ನ ಪಥವನ್ನೇ ಬದಲಿಸಿದ್ದು ದೀಪಸ್ತಂಭದತ್ತ ತೆರಳುವ ಕಾಲುದಾರಿಯನ್ನೇ ಕಬಳಿಸಿಕೊಂಡು ಮುಂಭಾಗದಿಂದ ಹರಿಯಲಾರಂಭಿಸಿದೆ. ಕಾಲು ದಾರಿ ಕೊಚ್ಚಿಹೋಗಿದ್ದು, ಎರಡೂ ಭಾಗಗಳಿಂದ ಸಮುದ್ರ ಕೊರೆತ ಉಂಟಾದಲ್ಲಿ ದೀಪಸ್ತಂಭವೇ ಸಮುದ್ರ ಪಾಲಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕಾಪು ಬೀಚ್ ನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಲೈಟ್ ಹೌಸ್ನ ಹಿಂಭಾಗದಲ್ಲಿ ನದಿ ಸಮುದ್ರ ಸೇರ್ತಾ ಇತ್ತು. ಭಾರೀ ಮಳೆಯಿಂದಾಗಿ ನದಿ ಪಾತ್ರವೇ ಬದಲಾಗಿದ್ದು, ನೆರೆ ನೀರು ತನ್ನ ಪಥವನ್ನೇ ಬದಲಿಸಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಾಪು ಬಳಿಯ ಪಡು ಗ್ರಾಮ, ಗರಡಿ ಪ್ರದೇಶ, ಸುಬ್ಬಯ್ಯ ತೋಟ, ಬೈರು ಗುತ್ತುತೋಟ ಸೇರಿದಂತೆ ಆಸುಪಾಸಿನ ಭಾಗದಲ್ಲಿ ಎಲ್ಲೆಂದರಲ್ಲಿ ಹರಿಯುತ್ತಿರುವ ನದಿ ನೀರು ಲೈಟ್ ಹೌಸ್ ಮುಂಭಾಗದಿಂದಲೇ ಸಮುದ್ರ ಸೇರುತ್ತಿದೆ. ಇದರಿಂದ ದೀಪಸ್ತಂಭದತ್ತ ಹೋಗಲು ದಾರಿ ಇಲ್ಲದಾಗಿದ್ದು, ಅಲ್ಲದೆ ನೆರೆನೀರು ಇದೇ ರೀತಿ ಹರಿದರೆ ಲೈಟ್ ಹೌಸ್ ಏರುವ ಮೆಟ್ಟಲುಗಳು ಕೊಚ್ಚಿ ಹೋಗುವ ಸಾಧ್ಯತೆ ಇದೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am