ಬ್ರೇಕಿಂಗ್ ನ್ಯೂಸ್
15-03-22 12:30 pm Mangalore Correspondent ಕರಾವಳಿ
ಉಳ್ಳಾಲ, ಮಾ.15: ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತ್ರವಲ್ಲದೆ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಬೋಳಿಯಾರ್ ಹೇಳಿದ್ದಾರೆ.
ಕುತ್ತಾರಿನ ಖಾಸಗಿ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಟಿಯನ್ನುದ್ದೇಶೀಸಿ ಅವರು ಮಾತನಾಡಿದರು. ಮೊನ್ನೆಯಷ್ಟೇ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದಾರೆ. ಇದರ ಬೆನ್ನಲ್ಲೇ ಅನೇಕ ಕಾಂಗ್ರೆಸ್ ಕಾರ್ಯಕರ್ತರು ತನಗೆ ನೇರ ಫೋನ್ ಕರೆ ಮಾಡಿ ಬಿಜೆಪಿಗೆ ಸೇರುವುದಾಗಿ ಹೇಳಿದ್ದಾರೆ. ಅಸೈಗೋಳಿಯಲ್ಲೇ ಮುಂಬರುವ ದಿವಸಗಳಲ್ಲಿ ಸಾವಿರಾರು ಕಾಂಗ್ರೆಸಿಗರು ಬಹಿರಂಗವಾಗಿ ಬಿಜೆಪಿ ಸೇರಲಿದ್ದಾರೆಂದು ಬೋಳಿಯಾರ್ ಹೇಳಿದರು.

ಕಾಂಗ್ರೆಸಿಗರು ಬಿಜೆಪಿಯತ್ತ ಮುಖ ಮಾಡಲು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ಆಡಳಿತ ವೈಫಲ್ಯ ಮತ್ತು ತಾರತಮ್ಯ ನೀತಿಯೇ ಕಾರಣ. ಖಾದರ್ ಮಾಜಿ ಸಚಿವರಾಗಿದ್ದು ಕೂಡ ಕ್ಷೇತ್ರದ ಅಭಿವೃದ್ಧಿ ಪಡಿಸುವಲ್ಲಿ ವಿಫಲರಾಗಿದ್ದಾರೆ. ಖಾದರ್ ನಾಲ್ಕು ಬಾರಿ ಶಾಸಕ, ಎರಡು ಸಲ ಸಚಿವರಾಗಿದ್ದರೂ ಕ್ಷೇತ್ರಕ್ಕೆ ಅವರಿಂದ ಕನಿಷ್ಠ ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿಲ್ಲ. ಉಳ್ಳಾಲ ನಗರಸಭೆ ಆಗಿ ಮೇಲ್ದರ್ಜೆಗೇರಿದರೂ ಒಳಚರಂಡಿ ಆಗಿಲ್ಲ.
ಮುಂದಿನ ದಿನಗಳಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರತಿಸ್ಪರ್ಧಿಯಾಗಿ ಉಳಿದಿರುವುದಿಲ್ಲ, ಬದಲಾಗಿ ಬಿಜೆಪಿ ಮತ್ತು ಎಸ್ಡಿಪಿಐ ನಡುವೆ ನೇರಸ್ಪರ್ಧೆ ಏರ್ಪಡುತ್ತದೆ ಎಂಬುದು ಇತ್ತೀಚಿನ ಕೆಲವು ಬೆಳವಣಿಗೆಗಳಿಂದ ಅರಿವಾಗುತ್ತದೆ ಎಂದರು.
ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್ ಮಾತನಾಡಿ ಇತ್ತೀಚೆಗೆ ಶಾಸಕರು ಮುಡಿಪು ಮೂಳೂರು ರಸ್ತೆ ಕಾಮಗಾರಿಯ ಬಗ್ಗೆ ಮಾಧ್ಯಮಗಳಲ್ಲಿ ಉಸ್ತುವಾರಿ ಸಚಿವರ ನಿವಾಸದ ಮುಂದೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದು ಕಾಮಗಾರಿ ವಿಳಂಬಕ್ಕೆ ಸರ್ಕಾರ ಕಾರಣ ಎಂಬಂತೆ ತಿಳಿಸಿದ್ದಾರೆ. ಇದು ಅವರ ವೈಫಲ್ಯ ಮುಚ್ಚಿಡುವ ಕುತಂತ್ರ ಎಂದು ಅವರು ಆರೋಪಿಸಿದರು. ಆ ಕಾಮಗಾರಿ ಶಾಸಕರು ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಪ್ರಾರಂಭಗೊಂಡಿದ್ದು, ಇವರದೇ ಆದ ಗುತ್ತಿಗೆದಾರರು ಈ ಕಾಮಗಾರಿ ವಿಳಂಬಗೊಳ್ಳಲು ಕಾರಣವಾಗಿದ್ದಾರೆ.
ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದಾಗ ಸರ್ಕಾರದಿಂದ ಅಥವಾ ಇಲಾಖೆಯಿಂದ ಯಾವುದೇ ರೀತಿಯ ತೊಂದರೆಯಾಗಿಲ್ಲ, ಗುತ್ತಿಗೆದಾರರು ವಿಳಂಬ ಕಾಮಗಾರಿಗೆ ಕಾರಣ ಎಂದು ತಿಳಿಸುತ್ತಾರೆ. ಈ ಬಗ್ಗೆ ಉಸ್ತುವಾರಿ ಸಚಿವರು ಅರಿತುಕೊಂಡು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದಾರೆ ಎಂದರು. ಇದೇ ರೀತಿ ತೊಕ್ಕೊಟ್ಟು ಕುತ್ತಾರ್ ರಸ್ತೆ ಹಾಗೂ ಉಳ್ಳಾಲ ಯುಜಿಡಿ ಕಾಮಗಾರಿಯೂ ಶಾಸಕರ ನಿಷ್ಕ್ರಿಯತೆಯಿಂದ ವಿಳಂಬಗೊಳ್ಳುತ್ತಿದೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಹೇಮಂತ್ ಶೆಟ್ಟಿ ಹಾಗೂ ನವೀನ್ ಪಾದಲ್ಪಾಡಿ ಉಪಸ್ಥಿತರಿದ್ದರು.
Mangalore Thousands of Congress members will quit party and join BJP says District vice president Santosh Boliyar.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm