ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm