ಬ್ರೇಕಿಂಗ್ ನ್ಯೂಸ್
22-09-20 01:38 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 22: ಸುರತ್ಕಲ್ ಬಳಿಯ ಮನೆಯೊಂದರಲ್ಲಿ ನಗದು ಮತ್ತು ಚಿನ್ನಾಭರಣ ಲೂಟಿ ಮಾಡಿದ್ದ ಅಂತಾರಾಜ್ಯ ಕಳ್ಳರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಜಾರ್ಡಿನ್ ಅಪಾರ್ಟ್ಮೆಂಟಿನ ವಿದ್ಯಾ ಪ್ರಭು ಎಂಬವರ ಮನೆಯಿಂದ ಕಳವು ನಡೆದಿತ್ತು. ಮನೆಯಲ್ಲಿದ್ದ 51 ಲಕ್ಷ ನಗದು, 224 ಗ್ರಾಂ ಚಿನ್ನ ಕಳವಾದ ಬಗ್ಗೆ ವಿದ್ಯಾ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು, ಅಪಾರ್ಟ್ಮೆಂಟ್ ಸೆಕ್ರೆಟರಿ ನವೀನ್ ಎಂಬಾತನ ಮೇಲೆ ಸಂಶಯ ಬಂದು ತನಿಖೆ ಕೇಂದ್ರೀಕರಿಸಿದ್ದಾರೆ. ತನಿಖೆಯಲ್ಲಿ ನವೀನ್ ಕಳ್ಳತನಕ್ಕೆ ಸಂಚು ರೂಪಿಸಿದ್ದು ತಿಳಿದುಬಂದಿದ್ದಲ್ಲದೆ ನಾಲ್ವರನ್ನು ಬಂಧಿಸಿದ್ದಾರೆ.
ಸುರತ್ಕಲ್ ನಲ್ಲಿ ಬಾರ್ ಮ್ಯಾನೇಜರ್ ಆಗಿದ್ದ ನವೀನ್ ಸೇನೆಯಲ್ಲಿ 15 ವರ್ಷ ಕೆಲಸ ಮಾಡಿ ವಾಲ್ಯುಂಟರಿ ರಿಟೈರ್ಮೆಂಟ್ ಪಡೆದು ಬಂದಿದ್ದ. ಪೆಟ್ರೋಲ್ ಬಂಕ್ ಮಾಲಕಿಯಾಗಿರುವ ವಿದ್ಯಾ ಪ್ರಭು ಫ್ಲಾಟ್ ಹೊಂದಿರುವುದು ಮತ್ತು ಆಗಾಗ ಬಂದು ಹೋಗುತ್ತಿದ್ದ ಮಾಹಿತಿ ಇದ್ದ ನವೀನ್ ಅಲಿಯಾಸ್ ಲೋಕನಾಥ್, ಕಳ್ಳತನಕ್ಕೆ ಪ್ಲಾನ್ ಹಾಕಿದ್ದಾನೆ. ಬಾರ್ ನಲ್ಲಿ ವೈಟರ್ ಆಗಿದ್ದ ಸಂತೋಷ್ ನೆರವು ಪಡೆದು ಕೇರಳದ ತಿರುವನಂತಪುರ ಮೂಲದ ರಘು, ಅಮೇಶ್ ಎಂಬವರ ಮೂಲಕ ಕೃತ್ಯ ನಡೆಸಿದ್ದಾನೆ. ಈ ನಾಲ್ವರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಿಂದ 30.85 ಲಕ್ಷ ನಗದು ಮತ್ತು 224 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯದಲ್ಲಿ ಕೇರಳ ಮೂಲದ ಇನ್ನಿಬ್ಬರು ಪಾಲ್ಗೊಂಡಿದ್ದು ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಮಂಗಳೂರು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸುರತ್ಕಲ್ ಬಳಿ ಪೆಟ್ರೋಲ್ ಬಂಕ್ ಹೊಂದಿದ್ದ ವಿದ್ಯಾ ಪ್ರಭು ಮತ್ತು ಪತಿ ಕಡಂಬೋಡಿಯಲ್ಲಿ ಮನೆ ಹೊಂದಿದ್ದರು. ಆದರೆ, ಇನ್ನಿತರ ವ್ಯವಹಾರವನ್ನು ಫ್ಲಾಟ್ ನಲ್ಲಿದ್ದುಕೊಂಡು ಮಾಡುತ್ತಿದ್ದರು. ಪಂಪ್ ನಲ್ಲಿ ಸಂಗ್ರಹವಾಗುತ್ತಿದ್ದ ನಗದನ್ನು ಕೆಲವೊಮ್ಮೆ ಫ್ಲಾಟ್ ನಲ್ಲಿ ಇಟ್ಟು ಹೋಗುತ್ತಿದ್ದರು. ಆ ಮನೆಯಲ್ಲಿ ಬೇರೆ ಯಾರೂ ಇರುತ್ತಿರಲಿಲ್ಲ. ಈ ಬಗ್ಗೆ ಅರಿತಿದ್ದ ಫ್ಲಾಟ್ ಸೆಕ್ರೆಟರಿ ನವೀನ್ ಕಳ್ಳತನಕ್ಕೆ ಪ್ಲಾನ್ ಹಾಕಿದ್ದ. ಮಹತ್ವದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಎಸಿಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ ಭೇದಿಸಿದ್ದಾರೆ ಎಂದು ಕಮಿಷನರ್ ವಿಕಾಸ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
Join our WhatsApp group for latest news updates
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm