ಬ್ರೇಕಿಂಗ್ ನ್ಯೂಸ್
26-03-22 11:01 am Mangalore Correspondent ಕರಾವಳಿ
ಉಳ್ಳಾಲ, ಮಾ.26: ಸ್ಕೂಟರ್ ಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕಾಪಿಕಾಡು ಎಂಬಲ್ಲಿ ನಡೆದಿದ್ದು, ಹಿಟ್ & ರನ್ ನಡೆಸಿದ ಕಾರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಬಳಿಯ ಪ್ರತಿಷ್ಠಿತ ಜಾನ್ ಬೇಕರಿ ಕುಟುಂಬದ ಎಮಿಲ್ಡಾ ಡಿಸೋಜ (59) ಮೃತ ಮಹಿಳೆ. ಇಂದು ಮೊಮ್ಮಗಳ ಹುಟ್ಟುಹಬ್ಬ ಆಚರಣೆ ಇದ್ದ ಕಾರಣ ಎಮಿಲ್ಡ ಅವರು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಹಿಂತಿರುಗಿದ್ದರು. ಅರ್ಧ ದಾರಿಯ ವರೆಗೂ ಸಂಬಂಧಿಕರ ಜತೆಗೆ ನಡೆದುಕೊಂಡೇ ಬರುತ್ತಿದ್ದ ಅವರನ್ನ ಪ್ಲೇವಿ ಡಿಸೋಜ ಎಂಬ ಪರಿಚಯಸ್ಥ ಮಹಿಳೆ ತನ್ನ ಆಕ್ಟಿವಾ ಸ್ಕೂಟರಿಗೆ ಹತ್ತಿಸಿದ್ದಾರೆ.
ಸ್ಕೂಟರ್ ಕಾಪಿಕಾಡು ರಾಜ್ ಕೇಟರರ್ಸ್ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋಜ(47) ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯಲ್ಲಿ ಮೊಮ್ಮಗುವಿನ ಹುಟ್ಟುಹಬ್ಬಕ್ಕಾಗಿ ಎಮಿಲ್ಡ ಅವರು ಇಡ್ಲಿಗಳನ್ನ ತರಿಸಿ ಊಟಕ್ಕೆ ತಯಾರಿ ನಡೆಸಿದ್ದರಂತೆ. ಮೊಮ್ಮಗಳ ಹುಟ್ಟುಹಬ್ಬದ ದಿವಸವೇ ಎಮಿಲ್ಡ ಅವರು ಇಹಲೋಕ ತ್ಯಜಿಸಿದ್ದು ಕುಟುಂಬ ವರ್ಗದವರನ್ನ ಶೋಕದಲ್ಲಿ ಮುಳುಗಿಸಿದೆ. ಮೃತ ಎಮಿಲ್ಡ ಅವರು ಪತಿ, ಪುತ್ರ, ಪುತ್ರಿ, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore hit and run accident at Ullal 59-year-old woman pillon rider killed on the spot. The deceased has been identified as Emeld Dsouza. As it was a granddaughters birthday she was on her way to the church during which an unknown car rammed their two-wheeler where Emeld was seriously hurt and died on spot.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am