ಬ್ರೇಕಿಂಗ್ ನ್ಯೂಸ್
26-03-22 11:01 am Mangalore Correspondent ಕರಾವಳಿ
ಉಳ್ಳಾಲ, ಮಾ.26: ಸ್ಕೂಟರ್ ಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕಾಪಿಕಾಡು ಎಂಬಲ್ಲಿ ನಡೆದಿದ್ದು, ಹಿಟ್ & ರನ್ ನಡೆಸಿದ ಕಾರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಬಳಿಯ ಪ್ರತಿಷ್ಠಿತ ಜಾನ್ ಬೇಕರಿ ಕುಟುಂಬದ ಎಮಿಲ್ಡಾ ಡಿಸೋಜ (59) ಮೃತ ಮಹಿಳೆ. ಇಂದು ಮೊಮ್ಮಗಳ ಹುಟ್ಟುಹಬ್ಬ ಆಚರಣೆ ಇದ್ದ ಕಾರಣ ಎಮಿಲ್ಡ ಅವರು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಹಿಂತಿರುಗಿದ್ದರು. ಅರ್ಧ ದಾರಿಯ ವರೆಗೂ ಸಂಬಂಧಿಕರ ಜತೆಗೆ ನಡೆದುಕೊಂಡೇ ಬರುತ್ತಿದ್ದ ಅವರನ್ನ ಪ್ಲೇವಿ ಡಿಸೋಜ ಎಂಬ ಪರಿಚಯಸ್ಥ ಮಹಿಳೆ ತನ್ನ ಆಕ್ಟಿವಾ ಸ್ಕೂಟರಿಗೆ ಹತ್ತಿಸಿದ್ದಾರೆ.


ಸ್ಕೂಟರ್ ಕಾಪಿಕಾಡು ರಾಜ್ ಕೇಟರರ್ಸ್ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋಜ(47) ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಮನೆಯಲ್ಲಿ ಮೊಮ್ಮಗುವಿನ ಹುಟ್ಟುಹಬ್ಬಕ್ಕಾಗಿ ಎಮಿಲ್ಡ ಅವರು ಇಡ್ಲಿಗಳನ್ನ ತರಿಸಿ ಊಟಕ್ಕೆ ತಯಾರಿ ನಡೆಸಿದ್ದರಂತೆ. ಮೊಮ್ಮಗಳ ಹುಟ್ಟುಹಬ್ಬದ ದಿವಸವೇ ಎಮಿಲ್ಡ ಅವರು ಇಹಲೋಕ ತ್ಯಜಿಸಿದ್ದು ಕುಟುಂಬ ವರ್ಗದವರನ್ನ ಶೋಕದಲ್ಲಿ ಮುಳುಗಿಸಿದೆ. ಮೃತ ಎಮಿಲ್ಡ ಅವರು ಪತಿ, ಪುತ್ರ, ಪುತ್ರಿ, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore hit and run accident at Ullal 59-year-old woman pillon rider killed on the spot. The deceased has been identified as Emeld Dsouza. As it was a granddaughters birthday she was on her way to the church during which an unknown car rammed their two-wheeler where Emeld was seriously hurt and died on spot.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm