ಬ್ರೇಕಿಂಗ್ ನ್ಯೂಸ್
28-03-22 10:19 pm Mangalore Correspondent ಕರಾವಳಿ
ಮಂಗಳೂರು, ಮಾ.28: ನಗರದಲ್ಲಿ ಕಾಶ್ಮೀರದ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿದ ಸಂತರು ದಿಗ್ಭ್ರಮೆಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಚಿತ್ರವನ್ನು ನೋಡಿದ ನನಗೆ ರಕ್ತ ಕುದಿಯುತ್ತಿದೆ. ಹಿಂದಿನ ಸರಕಾರದ ದೌರ್ಬಲ್ಯ, ನಿರ್ಲಕ್ಷ್ಯದಿಂದಾಗಿ ಇಷ್ಟೆಲ್ಲಾ ನಡೆದಿದೆ. ಭಯೋತ್ಪಾದಕರ ಕ್ರೌರ್ಯ ಇಲ್ಲಿ ಅನಾವರಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕರ ಕರಾಳ ಕ್ರೌರ್ಯವನ್ನು ನೋಡಿ, ಅಲ್ಲಿನ ದೃಶ್ಯಗಳನ್ನು ನೋಡಿ ಸಂತನಾದ ನನಗೇ ಕಣ್ಣೀರು, ಆಕ್ರೋಶ ಬರಬೇಕಾದರೆ ಜನಸಾಮಾನ್ಯರಿಗೆ ಏನಾಗಬಹುದು.. ಕಾಶ್ಮೀರದಲ್ಲಿ ಹಿಂದುಗಳ ಮೇಲೆ ನಡೆದ ಕ್ರೌರ್ಯವನ್ನು ಊಹಿಸಲು ಸಾಧ್ಯವಿಲ್ಲ. ಇದು ಇಲ್ಲಿಗೇ ಕೊನೆಗೊಳ್ಳಬೇಕು. ಮುಂದೆ ಯಾವತ್ತೂ ಕೇರಳ ಫೈಲ್ಸ್, ಕೊಡಗು ಫೈಲ್ಸ್ ನಂತಹ ಸಿನಿಮಾಗಳು ಮತ್ತೆ ಬರುವಂತೆ ಆಗಬಾರದು. ಇದಕ್ಕಾಗಿ ಹಿಂದುಗಳು ಎಚ್ಚತ್ತುಕೊಳ್ಳಬೇಕು. ಹಿಂದುಗಳು ಅಲ್ಪಸಂಖ್ಯಾತರಾದರೆ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ವಜ್ರದೇಹಿ ಸ್ವಾಮೀಜಿ ಹೇಳಿದರು.
ಚಿಲಿಂಬಿ ಓಂ ಶಕ್ತಿ ಮಠದ ವಿದ್ಯಾನಂದ ಸ್ವಾಮೀಜಿ ಮಾತನಾಡಿ, ನಿದ್ದೆ ಮಾಡುತ್ತಿರುವ ಹಿಂದುಗಳು ಇನ್ನಾದರೂ ಎಚ್ಚತ್ತುಕೊಳ್ಳಬೇಕು. ಹಿಂದು ಸಂಸ್ಕೃತಿ ಬಲಹೀನವಾದರೆ ಸಮಾಜದಲ್ಲಿ ಸೆಕ್ಯುಲರಿಸಂ ಅನ್ನುವುದೇ ನಾಶವಾಗುತ್ತದೆ. ಹಿಂದು ಸನಾತನ ಸಂಸ್ಕೃತಿಯಿಂದ ಮಾತ್ರ ಸೆಕ್ಯುಲರಿಸಂ ಉಳಿಯಲು ಸಾಧ್ಯ. ಹಿಂದುಗಳ ಸಂಖ್ಯೆ ಕಡಿಮೆಯಾದ ಕೂಡಲೇ ಅವರನ್ನು ಈ ಪರಿ ಚಿತ್ರಹಿಂಸೆ ಕೊಟ್ಟಿದ್ದಾರಂದ್ರೆ ಅದನ್ನು ಊಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಮೂಡುಬಿದಿರೆ ಜೈನ ಮಠದ ಭಟ್ಟಾರಕ ಶ್ರೀ ಮಾತನಾಡಿ, ಸಿನಿಮಾದಲ್ಲಿನ ದೃಶ್ಯಗಳು ಭೀಭತ್ಸವಾಗಿದೆ. ಇಂತಹ ಸ್ಥಿತಿ ಮುಂದೆ ಯಾವತ್ತೂ ಬರಬಾರದು. ಅದಕ್ಕಾಗಿ ಹಿಂದು- ಮುಸ್ಲಿಮರು ಸೌಹಾರ್ದದಿಂದ ಬಾಳಬೇಕು. ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು. ವಿಶ್ವ ಹಿಂದು ಪರಿಷತ್ತಿನಿಂದ ಹತ್ತು ಜನ ಸಂತರು ಮತ್ತು ನೂರಾರು ಕಾರ್ಯಕರ್ತರಿಗೆ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
Mangalore It is because of Congress failure we are seeing Kashmir files movies says Gurupura Vajradehi Swamiji after watching the movie at cinepolis in city center.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm