ಬ್ರೇಕಿಂಗ್ ನ್ಯೂಸ್
30-03-22 03:05 pm Mangalore Correspondent ಕರಾವಳಿ
ಮಂಗಳೂರು, ಮಾ.30: ದೇಶಕ್ಕೆ ಅನ್ಯಾಯ ಮಾಡಿದ್ದವರನ್ನೇ ಪಠ್ಯ ಪುಸ್ತಕದಲ್ಲಿ ಮಕ್ಕಳಿಗೆ ಬೋಧಿಸಲಾಗಿದೆ. ಅಕ್ಬರ್ ದಿ ಗ್ರೇಟ್, ಔರಂಗಜೇಬನನ್ನು ಟೈಗರ್ ಅಂತ ಹಿಂದಿನಿಂದಲೂ ಹೇಳಿಕೊಟ್ಟಿದ್ದಾರೆ. ನಮ್ಮ ದೇಶದ ಹೀರೋಗಳನ್ನು ಶಿಕ್ಷಣ ವ್ಯವಸ್ಥೆ ಜೀರೋ ಮಾಡಿಟ್ಟಿದೆ. ಅವರನ್ನು ಹೀರೋ ಮಾಡುವ ಕೆಲಸವನ್ನು ಈಗ ಮಾಡಲಾಗುತ್ತಿದೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಪಠ್ಯದಲ್ಲಿ ಟಿಪ್ಪು ವೈಭವೀಕರಣ ಕೈಬಿಡುವ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಶಾಲೆಯ ಪಠ್ಯ ಪುಸ್ತಕಗಳಲ್ಲಿ ದೇಶ ವಿರೋಧಿಗಳನ್ನೇ ವ್ಯವಸ್ಥಿತವಾಗಿ ವೈಭವೀಕರಿಸಿಕೊಂಡು ಬರಲಾಗಿದೆ. ಇದನ್ನು ಸರಿಪಡಿಸುವ ಬಗ್ಗೆ ಸರ್ಕಾರ ಯೋಚನೆ ಮಾಡುತ್ತಿರುವುದು ಅಭಿನಂದನೀಯ. ಟಿಪ್ಪು ಸುಲ್ತಾನ್ ಬಗ್ಗೆ ಪಾಠ ನಾವ್ಯಾಕೆ ಕೇಳಬೇಕು. ಹಿಂದು ಸಮಾಜಕ್ಕೆ ಅನ್ಯಾಯ ಮಾಡಿದವನ, ಸಾವಿರ ಸಾವಿರ ಹಿಂದೂಗಳನ್ನು ಕ್ರಿಶ್ಚಿಯನ್ನರನ್ನ ಕೊಲೆ ಮಾಡಿದವನ ಬಗ್ಗೆ ಯಾಕೆ ಓದಬೇಕು ? ಭಾರತದ ಬಗ್ಗೆ ಚಿಂತನೆ ಮಾಡುವವನು ಮಾತ್ರ ಚಿಂತಕ. ಚೀನಾದ ಬಗ್ಗೆ ಚಿಂತನೆ ಮಾಡುವವನು, ಅಮೆರಿಕದ ಬಗ್ಗೆ ಚಿಂತನೆ ಮಾಡುವನು ಚಿಂತಕ ಹೇಗೆ ಆಗುತ್ತಾನೆ ಎಂದು ಕಲ್ಲಡ್ಕ ಭಟ್ ಪ್ರಶ್ನೆ ಎತ್ತಿದ್ದಾರೆ.
ಕ್ಯಾಂಪಸ್ ಫ್ರಂಟ್ ಸಂಘಟನೆ ಕಾರ್ಯಕರ್ತರು ತಮ್ಮ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಧನ್ಯವಾದ ಹೇಳಿದ ಪ್ರಭಾಕರ ಭಟ್, ರಾಷ್ಟ್ರದ ಹಿತಕ್ಕೋಸ್ಕರ ಕೆಲಸ ಮಾಡೋರು ಕೆಲಸ ಮಾಡುತ್ತ ಹೋಗ್ತಿದ್ದಾರೆ. ಕೆಲವರು ವಿರೋಧ ಮಾಡ್ತಾರೆ, ಮಾಡ್ತಾನೆ ಇರ್ತಾರೆ. ಈ ದೇಶದಲ್ಲಿ ಚೆನ್ನಾಗಿ ಬದುಕ ಬೇಕು ಅಂತಿದ್ರೆ, ಸಾಮರಸ್ಯದ ಜೀವನ ನಡೆಸಬೇಕು ಅಂತಿದ್ದರೆ ದೇಶಕ್ಕೋಸ್ಕರ ಬದುಕ ಬೇಕು. ಇಲ್ಲ ಅಂತಾದ್ರೆ ಎಲ್ಲಿ ಬದುಕ ಬೇಕೋ ಅಲ್ಲಿಗೇ ಹೋಗಿ ಬದುಕಿಕೊಳ್ಳಿ. ಇಲ್ಲಿ ಹಿಂದುಗಳ ಜೊತೆಯಲ್ಲಿ ಎಲ್ಲರೂ ಕೂಡಿಕೊಂಡು ಬದುಕುವ ಪ್ರಯತ್ನ ಮಾಡಬೇಕು. ಹೊರಗಿಂದ ಬಂದವರು, ಇಲ್ಲಿಯೇ ಇದ್ದವರು ಎಲ್ಲರೂ ಒಟ್ಟಿಗೆ ಬದುಕುವ ಪ್ರಯತ್ನ ಮಾಡಬೇಕು. ಇಡೀ ಜಗತ್ತಿನಲ್ಲಿ ಮೋಸ್ಟ್ ಸೆಕ್ಯುಲರ್ ಗಳೆಂದರೆ ಅದು ಹಿಂದೂಗಳು ಮಾತ್ರ. ಅತಿ ಹೆಚ್ಚು ಉದಾರವಾದಿಗಳು ಅಂದರೆ ಹಿಂದುಗಳು. ಅವರ ಜೊತೆಗೇ ಬದುಕಲು ಆಗಲ್ಲ ಅಂದ್ರೆ ಏನು ಹೇಳಬೇಕು ಎಂದರು.
ಹಿಂದು ದೇಗುಲಗಳ ಆವರಣದಲ್ಲಿ ಹಿಂದುಯೇತರರಿಗೆ ವ್ಯಾಪಾರ ನಿಷೇಧ ಬಗ್ಗೆ ಕೇಳಿದ ಪ್ರಶ್ನೆಗೆ, ಇಂತಹ ನೀತಿಯನ್ನು ಜಾರಿಗೆ ತಂದಿದ್ದೇ ಕಾಂಗ್ರೆಸ್ ನವರು. ಅವರಿಗೆ ಈಗ ಗೊತ್ತಿಲ್ಲ ಪಾಪ. ಈವರೆಗೆ ಹಿಂದುಗಳು ಉದಾರಿಗಳಾಗೇ ಇದ್ದರು. ಯಾವಾಗ ಹಿಜಾಬ್ ತೀರ್ಪಿನ ವಿರುದ್ಧ ರಾಜ್ಯ ಬಂದ್ ಕರೆ ಕೊಟ್ಟಿದ್ದರೋ ಅದು ತಪ್ಪು. ಅದು ಶುದ್ಧ ಸಂವಿಧಾನ ವಿರೋಧಿ ನಿಲುವು. ಈ ಹಿನ್ನೆಲೆಯಲ್ಲಿ ಹಿಂದು ಎಚ್ಚತ್ತುಕೊಂಡಿದ್ದಾನೆ, ಅದಕ್ಕಾಗಿ ಬಹಿಷ್ಕಾರದ ಅಸ್ತ್ರ ಹಿಡಿದಿದ್ದಾನೆ. ದೇವಾಲಯ, ಜಾತ್ರೆ ಸಂದರ್ಭದಲ್ಲಿ 100 ಮೀ ವ್ಯಾಪ್ತಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಪ್ರಭಾಕರ ಭಟ್ ಹೇಳಿದರು.
Mangalore Our Muslim national heroes are zero in education taunts Kalladka Prabhakar Bhat.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm