ಬ್ರೇಕಿಂಗ್ ನ್ಯೂಸ್
06-04-22 06:06 pm Mangalore Correspondent ಕರಾವಳಿ
ಪುತ್ತೂರು, ಎ.6: ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಅನೈತಿಕ ಪೊಲೀಸ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ ಸಂಬಂಧಿಸಿ ಹಿಂದು ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕರನ್ನು ರಾತ್ರೋರಾತ್ರಿ ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿ ತರಾಟೆಗೆತ್ತಿಕೊಂಡ ಘಟನೆ ನಡೆದಿದ್ದು , ಶಾಸಕರ ವಿರುದ್ಧ ಘೆರಾವ್ ಹಾಕಿದ್ದಾರೆ.
ಎ.5ರ ಮಂಗಳವಾರ ಮಧ್ಯಾಹ್ನ ನಜೀರ್ ಎಂಬ ಪುತ್ತೂರಿನ ಯುವಕನೊಬ್ಬ ಹಿಂದು ಯುವತಿಯನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಗುಂಡ್ಯದಲ್ಲಿ ಹಿಂದು ಸಂಘಟನೆಗಳ ಯುವಕರು ಅಡ್ಡ ಹಾಕಿದ್ದರು. ಆನಂತರ, ಯುವಕ ನಜೀರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಹಲ್ಲೆಗೊಳಗಾದ ನಜೀರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪೊಲೀಸರು ಸಂಜೆ ಹೊತ್ತಿಗೆ ಹಿಂದು ಸಂಘಟನೆಗೆ ಸೇರಿದ ಐವರು ಯುವಕರನ್ನು ಬಂಧಿಸಿದ್ದರು. ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್, ಬಾಲಚಂದ್ರ, ರಂಜಿತ್ ಬಂಧಿತರಾಗಿದ್ದರು.

ಪೊಲೀಸರು ಬಂಧನ ಕಾರ್ಯಾಚರಣೆ ಬೆನ್ನಲ್ಲೇ ಅಲ್ಲಿನ ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಫೋನ್ ಮಾಡಿದ್ದರು. ಮಠಂದೂರು ಪುತ್ತೂರಿನಲ್ಲಿಯೇ ಇದ್ದರೂ, ತಾನು ಊರಲ್ಲಿ ಇಲ್ಲ. ಆಮೇಲೆ ನೋಡುತ್ತೇನೆ ಎಂದು ನುಣುಚಿಕೊಂಡಿದ್ದರು ಎನ್ನಲಾಗಿದೆ. ಆದರೆ, ಶಾಸಕರು ಊರಲ್ಲೇ ಇರುವ ಬಗ್ಗೆ ಮಾಹಿತಿ ಹೊಂದಿದ್ದ ಸಂಘಟನೆಯ ಕಾರ್ಯಕರ್ತರು ಮಠಂದೂರು ಎಲ್ಲಿ ಹೋಗುತ್ತಾರೆ ಅನ್ನುವುದರ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿ ವೇಳೆ ಶಾಸಕ ಮಠಂದೂರು ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಹೆದ್ದಾರಿಯಲ್ಲಿ ಬಸ್ಸನ್ನು ಅಡ್ಡಗಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರಿಗೆ ಘೆರಾವ್ ಹಾಕಿದ್ದಾರೆ. ಅಲ್ಲದೆ, ಶಾಸಕರನ್ನು ಬಸ್ಸಿನಿಂದ ಕೆಳಕ್ಕಿಳಿಸಿ ಸುಳ್ಳು ಹೇಳಿದ್ದಕ್ಕೆ ತರಾಟೆಗೆ ಎತ್ತಿಕೊಂಡಿದ್ದಾರೆ. ನಮ್ಮ ಯುವಕರು ಹಿಂದುತ್ವದ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗದ ನೀವು ತಾನು ಊರಲ್ಲೇ ಇಲ್ಲ ಎಂದು ಸುಳ್ಳು ಹೇಳಿದ್ದೀರಲ್ಲಾ ಎಂದು ಬೈದಿದ್ದಾರೆ.
Moral Policing in Gundya, VHP members gherao MLA travelling in KSRTC Bus in Mangalore.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm