ಬ್ರೇಕಿಂಗ್ ನ್ಯೂಸ್
06-04-22 06:06 pm Mangalore Correspondent ಕರಾವಳಿ
ಪುತ್ತೂರು, ಎ.6: ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಅನೈತಿಕ ಪೊಲೀಸ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ ಸಂಬಂಧಿಸಿ ಹಿಂದು ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕರನ್ನು ರಾತ್ರೋರಾತ್ರಿ ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿ ತರಾಟೆಗೆತ್ತಿಕೊಂಡ ಘಟನೆ ನಡೆದಿದ್ದು , ಶಾಸಕರ ವಿರುದ್ಧ ಘೆರಾವ್ ಹಾಕಿದ್ದಾರೆ.
ಎ.5ರ ಮಂಗಳವಾರ ಮಧ್ಯಾಹ್ನ ನಜೀರ್ ಎಂಬ ಪುತ್ತೂರಿನ ಯುವಕನೊಬ್ಬ ಹಿಂದು ಯುವತಿಯನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಗುಂಡ್ಯದಲ್ಲಿ ಹಿಂದು ಸಂಘಟನೆಗಳ ಯುವಕರು ಅಡ್ಡ ಹಾಕಿದ್ದರು. ಆನಂತರ, ಯುವಕ ನಜೀರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಹಲ್ಲೆಗೊಳಗಾದ ನಜೀರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪೊಲೀಸರು ಸಂಜೆ ಹೊತ್ತಿಗೆ ಹಿಂದು ಸಂಘಟನೆಗೆ ಸೇರಿದ ಐವರು ಯುವಕರನ್ನು ಬಂಧಿಸಿದ್ದರು. ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್, ಬಾಲಚಂದ್ರ, ರಂಜಿತ್ ಬಂಧಿತರಾಗಿದ್ದರು.
ಪೊಲೀಸರು ಬಂಧನ ಕಾರ್ಯಾಚರಣೆ ಬೆನ್ನಲ್ಲೇ ಅಲ್ಲಿನ ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಫೋನ್ ಮಾಡಿದ್ದರು. ಮಠಂದೂರು ಪುತ್ತೂರಿನಲ್ಲಿಯೇ ಇದ್ದರೂ, ತಾನು ಊರಲ್ಲಿ ಇಲ್ಲ. ಆಮೇಲೆ ನೋಡುತ್ತೇನೆ ಎಂದು ನುಣುಚಿಕೊಂಡಿದ್ದರು ಎನ್ನಲಾಗಿದೆ. ಆದರೆ, ಶಾಸಕರು ಊರಲ್ಲೇ ಇರುವ ಬಗ್ಗೆ ಮಾಹಿತಿ ಹೊಂದಿದ್ದ ಸಂಘಟನೆಯ ಕಾರ್ಯಕರ್ತರು ಮಠಂದೂರು ಎಲ್ಲಿ ಹೋಗುತ್ತಾರೆ ಅನ್ನುವುದರ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿ ವೇಳೆ ಶಾಸಕ ಮಠಂದೂರು ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹತ್ತಿದ್ದರು.
ಈ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಹೆದ್ದಾರಿಯಲ್ಲಿ ಬಸ್ಸನ್ನು ಅಡ್ಡಗಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರಿಗೆ ಘೆರಾವ್ ಹಾಕಿದ್ದಾರೆ. ಅಲ್ಲದೆ, ಶಾಸಕರನ್ನು ಬಸ್ಸಿನಿಂದ ಕೆಳಕ್ಕಿಳಿಸಿ ಸುಳ್ಳು ಹೇಳಿದ್ದಕ್ಕೆ ತರಾಟೆಗೆ ಎತ್ತಿಕೊಂಡಿದ್ದಾರೆ. ನಮ್ಮ ಯುವಕರು ಹಿಂದುತ್ವದ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗದ ನೀವು ತಾನು ಊರಲ್ಲೇ ಇಲ್ಲ ಎಂದು ಸುಳ್ಳು ಹೇಳಿದ್ದೀರಲ್ಲಾ ಎಂದು ಬೈದಿದ್ದಾರೆ.
Moral Policing in Gundya, VHP members gherao MLA travelling in KSRTC Bus in Mangalore.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm