ಬ್ರೇಕಿಂಗ್ ನ್ಯೂಸ್
23-09-20 03:51 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 23: ಮುಲ್ಕಿ ಸುಂದರರಾಮ ಶೆಟ್ಟಿ ಹೆಸರು ರಸ್ತೆ ನಾಮಕರಣದ ವಿವಾದ ಮುಗಿಯುತ್ತಲೇ ಒಂದು ವಿಭಾಗದವರು ನಾರಾಯಣ ಗುರು ಹೆಸರನ್ನು ಮಂಗಳೂರಿನ ವೃತ್ತವೊಂದಕ್ಕೆ ಇಡಬೇಕೆಂದು ಒತ್ತಾಯ ಆರಂಭಿಸಿದ್ದಾರೆ. ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ಹೆಸರು ಇಡಬೇಕೆಂದು ಬಿರುವೆರ್ ಕುಡ್ಲ ಸಂಘಟನೆಯಿಂದ ಮಹಾನಗರ ಪಾಲಿಕೆಗೆ ಮನವಿಯನ್ನೂ ನೀಡಲಾಗಿದೆ. ಈ ವಿಚಾರ ಪ್ರಸ್ತಾಪ ಆಗುತ್ತಲೇ ಲೇಡಿಹಿಲ್ ವೃತ್ತದ ಬಳಿ ಇರುವ ಶಾಲಾಡಳಿತ ಮಂಡಳಿಗಳು ವಿರೋಧ ಸೂಚಿಸಿದ್ದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ನಡುವೆ, ಕೆಲವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಖಾಸಗಿ ಬಸ್ ಗಳ ಮುಂದೆ ನಾರಾಯಣ ಗುರು ಸರ್ಕಲ್ ಎಂದು ಸ್ಟಿಕ್ಕರ್ ಅಂಟಿಸಿದ್ದಾರೆ. ಲೇಡಿಹಿಲ್ ದಾರಿಯಾಗಿ ಸಾಗುವ ಬಸ್ ಗಳ ಮುಂಭಾಗದಲ್ಲಿ ಈ ಸ್ಟಿಕ್ಕರ್ ಕಾಣಿಸಿಕೊಂಡಿದೆ. ಬಿರುವೆರ್ ಕುಡ್ಲ ಸಂಘಟನೆಯ ವತಿಯಿಂದ ಹೀಗೊಂದು ಅಭಿಯಾನ ನಡೀತಿದ್ಯಾ ಅನುಮಾನ ಕೇಳಿಬಂದಿದೆ. ಆದರೆ ಬಸ್ಸಿನ ಮುಂದೆ ಸ್ಟಿಕ್ಕರ್ ಅಂಟಿಸಿದ ಮಾತ್ರಕ್ಕೆ ಅಲ್ಲಿನ ಹೆಸರು ಬದಲಾವಣೆ ಆಗಲ್ಲ..! ಅಂಥ ಒತ್ತಾಯಕ್ಕೆ ಮತ್ತೊಂದಷ್ಟು ಒತ್ತಡ ಬೀಳುವುದಂತೂ ಖಚಿತ.
ಹೀಗೊಂದು ವಿವಾದ ಎದ್ದಿರುವ ಬಗ್ಗೆ ಬಿಲ್ಲವ ಸಂಘಗಳ ಅಭಿಪ್ರಾಯ ಕೇಳಿದರೆ ನಾವೇನು ಅಂತಹ ಒತ್ತಾಯ ಮಾಡಿಲ್ಲ ಎನ್ನುತ್ತಾರೆ. ನಾರಾಯಣ ಗುರು ಶಾಂತಿಪ್ರಿಯರು. ಎಲ್ಲರೂ ಒಂದೇ ಎಂದು ಸಾರಿದವರು. ಅಂಥ ವ್ಯಕ್ತಿಯ ಹೆಸರಲ್ಲಿ ವಿವಾದ ಎಬ್ಬಿಸಬಾರದು. ಈ ವಿವಾದಗಳ ಹಿಂದೆ ರಾಜಕೀಯ ಇದೆ. ಗುರುಗಳ ಹೆಸರಿಡುವ ವಿಚಾರವನ್ನು ಶಾಂತಿಯುತವಾಗೇ ಮುಗಿಸಬೇಕು. ಗುರುಗಳ ಹೆಸರಿಡುವುದಿದ್ದರೆ ಲೇಡಿಹಿಲ್ ವೃತ್ತವೇ ಆಗಬೇಕಂತಿಲ್ಲ. ಹೆಸರು ಇಲ್ಲದ ವೃತ್ತಗಳಿಗೆ ಇಟ್ಟು ಸೌಹಾರ್ದದಿಂದ ಕೆಲಸ ಮುಗಿಸಬಹುದು. ಹಂಪನಕಟ್ಟೆಯ ವೃತ್ತಕ್ಕೆ ಯಾವುದೇ ಹೆಸರಿಲ್ಲ. ಮಂಗಳೂರಿನಲ್ಲಿ ಪ್ರಮುಖ ವೃತ್ತವೂ ಹೌದು.. ಹಾಗೆ ನೋಡಿದರೆ ಹಂಪನಕಟ್ಟೆ ಸಿಗ್ನಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರು ಇಡಬಹುದು ಎಂದು ಬಿಲ್ಲವ ಸಂಘಟನೆಯ ಪ್ರಮುಖರೊಬ್ವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
05-02-23 02:56 pm
HK News Desk
ಪ್ರಣಾಳಿಕೆ ಸಮಿತಿಗೆ ರಾಜಿನಾಮೆ ನೀಡಿಲ್ಲ, ನಮ್ಮಲ್ಲಿ...
04-02-23 10:17 pm
ಅಮಿತ್ ಷಾ ಸಿಡಿ ಎಕ್ಸ್ಪರ್ಟ್ ಇದ್ದಾರೆ, ಗುಜರಾತ್ ಉ...
04-02-23 05:51 pm
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ...
04-02-23 05:16 pm
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್...
04-02-23 02:23 pm
06-02-23 04:04 pm
HK News Desk
ಬಾಂಗ್ಲಾದೇಶದಲ್ಲಿ 14 ಹಿಂದು ದೇವಾಲಯಗಳ ಧ್ವಂಸ; ರಾತ್...
06-02-23 10:53 am
ನಸುಕಿನಲ್ಲಿ ಭೀಕರ ಭೂಕಂಪ ; ತತ್ತರಿಸಿದ ಟರ್ಕಿ, ಸಿರಿ...
06-02-23 10:44 am
ಮರಣದಂಡನೆಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್...
05-02-23 02:16 pm
ಫೆ.6ರಂದು ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಹೆಲಿಕಾಪ...
04-02-23 02:15 pm
06-02-23 05:39 pm
Mangalore Correspondent
ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ನಷ್ಟವೇ ಹೊರತು ಲ...
05-02-23 09:39 pm
ಜನಾರ್ದನ ಪೂಜಾರಿ ಮೂಲಕ ಟಿಕೆಟಿಗಾಗಿ ಒತ್ತಡ ತಂತ್ರ ;...
05-02-23 05:33 pm
ಟಯರ್ ಬ್ಲಾಸ್ಟ್ ; ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ಕ...
05-02-23 12:37 pm
ಕರಾಟೆ ಕ್ಲಾಸಿಗೆ ಬಂದಿದ್ದ ಬಾಲಕಿಗೆ ಕಿರುಕುಳ ; ಆರೋಪ...
04-02-23 10:24 pm
06-02-23 03:20 pm
Mangalore Correspondent
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ದೋಖಾ ; ಭಾರೀ ಲಾಭ ತೋರ...
05-02-23 05:26 pm
ಧೂಳೆಬ್ಬಿಸಿ ಹೋಗಬೇಡ ಎಂದು ಹೇಳಿದ್ದಕ್ಕೆ ಟಿಪ್ಪರ್ ಹಾ...
03-02-23 11:38 pm
ಪದ್ಮಾ ರಾಯಲ್ ಚಾಲೆಂಜ್ ಸ್ಕೀಮ್ ಹೆಸರಲ್ಲಿ ನೂರಾರು ಮಂ...
03-02-23 08:42 pm