ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am