ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.



ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm